ಐದು ವಿಧಾನಸಭಾ ಚುನಾವಣೆಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್ ಸೋತ ಬೆನ್ನಲ್ಲೇ ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು ಏರ್ಪಟ್ಟಿದೆ.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಕರೆದಿರುವ ಇಂಡಿಯಾ ಮೈತ್ರಿಕೂಟದ ಸಭೆಗೆ ತೃಣಮೂಲ ಕಾಂಗ್ರೆಸ್ ಗೈರಾಗುವ ಸಾಧ್ಯತೆ ನಿಚ್ಚಳವಾಗಿದೆ.
ಆ ಸಭೆಯ ಬಗ್ಗೆ ನನಗೆ ಮಾಹಿತಿ ಇಲ್ಲ. ನನಗೆ ಉತ್ತರ ಪಶ್ಚಿಮ ಬಂಗಾಳದಲ್ಲಿ ಕಾರ್ಯಕ್ರಮ ನಿಗದಿಯಾಗಿದೆ. ನನಗೆ ಒಂದು ವೇಳೆ ಸಭೆಯ ಬಗ್ಗೆ ಮಾಹಿತಿ ಇದ್ದಿದ್ದರೆ ನಾನು ಉತ್ತರ ಬಂಗಾಳಕ್ಕೆ ಹೋಗುತ್ತಿರಲಿಲ್ಲ
ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿದೆ. ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಗೆಲ್ಲಬಹುದಿತ್ತು. ಇಂಡಿಯಾ ಮೈತ್ರಿಕೂಟದ ಪಕ್ಷಗಳಿಂದಲೇ ಕೆಲವು ಮತ ವಿಭಜನೆಯಾಗಿದೆ. ಇದೇ ಸತ್ಯ. ಸೀಟು ಹಂಚಿಕೆ ನಾವು ಸಲಹೆ ನೀಡಿದ್ದೆವು. ಮತ ವಿಭಜನೆಯಿಂದ ಕಾಂಗ್ರೆಸ್ ಸೋತಿದೆ
ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಡಿಸೆಂಬರ್ ೬ರಂದು ಕಾಂಗ್ರೆಸ್ ಮುಖ್ಯಸ್ಥರು ಇಂಡಿಯಾ ಮಿತ್ರ ಪಕ್ಷಗಳ ನಾಯಕರನ್ನು ಭೋಜನಕ್ಕೆ ಕರೆದಿದ್ದಾರೆ. ಮೂರು ತಂಗಳ ಬಳಿಕ ಬಳಿಕ ಅವರಿಗೆ ಇಂಡಿಯಾ ಮೈತ್ರಿಕೂಟ ನೆನೆಪಾಗಿದೆ. ಮುಂದೆ ನೋಡೋಣ
ಎಂದು ನ್ಯಾಷನಲ್ ಕಾನ್ಫೆರೆನ್ಸ್ ನಾಯಕ ಓಮರ್ ಅಬ್ದುಲ್ಲಾ ಕಾಂಗ್ರೆಸ್ಗೆ ಮೊಟಕಿದ್ದರು.
ADVERTISEMENT
ADVERTISEMENT