ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದನೇ ಟಿ-ಟ್ವೆಂಟಿ ಪಂದ್ಯ ಮಳೆಯ ಕಾರಣದಿಂದ ರದ್ದಾಗಿದೆ. ಈ ಮೂಲಕ ಐದು ಪಂದ್ಯಗಳ ಸರಣಿ 2-2 ಸಮಬಲದೊಂದಿಗೆ ಡ್ರಾ ಆಗಿದೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಪಂದ್ಯಕ್ಕೆ ಆರಂಭದಲ್ಲೇ ಮಳೆ ಆಡ್ಡಿ ಆಗಿತ್ತು. ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲಿಗೆ ಕ್ಷೇತ್ರ ರಕ್ಷಣೆಯನ್ನು ಆಯ್ದುಕೊಳ್ತು.
ಬ್ಯಾಟಿಂಗ್ಗೆ ಇಳಿದ ಭಾರತಕ್ಕೆ ಆರಂಭದಲ್ಲೇ ಆಘಾತ ಎದುರಾಗಿತ್ತು. 3.3 ಓವರ್ ಗಳಲ್ಲಿ 28 ರನ್ಗೆ ಟೀಂ ಇಂಡಿಯಾ 2 ವಿಕೆಟ್ ಕಳೆದುಕೊಂಡಿತ್ತು. ಆದ್ರೆ ಮತ್ತೆ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಪಂದ್ಯ ರದ್ದಾಯಿತು.
ಮಳೆಯ ಕಾರಣ ಪಂದ್ಯವನ್ನು 20 ಓವರ್ಗಳ ಬದಲು 19 ಓವರ್ಗೆ ಕಡಿತಗೊಳಿಸಲಾಗಿತ್ತು.