ಜೆಡಿಎಸ್​ ಯುವ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್​ ಕುಮಾರಸ್ವಾಮಿ ರಾಜೀನಾಮೆ

Nikhil Kumarswamy
Nikhil Kumarswamy

ಜೆಡಿಎಸ್​ ಹೀನಾಯ ಸೋಲಿನ ಬಳಿಕ ನಿಖಿಲ್​ ಕುಮಾರಸ್ವಾಮಿ ಅವರು ಜೆಡಿಎಸ್​ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಜೆಡಿಎಸ್​ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರಿಗೆ ನಿಖಿಲ್​ ಕುಮಾರಸ್ವಾಮಿ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಇತ್ತ ನಿನ್ನೆಯೇ ಸಿ ಎಂ ಇಬ್ರಾಹಿಂ ಕೂಡಾ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಜೆಡಿಎಸ್​ ಸಾರ್ವಕಾಲಿಕ ಕಳಪೆ ಪ್ರದರ್ಶನ ನೀಡಿ ಕೇವಲ 19 ಸ್ಥಾನ ಗೆದ್ದಿತ್ತು. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದ ನಿಖಿಲ್​ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್​ ಶಾಸಕ ಇಕ್ಬಾಲ್​ ಹುಸೇನ್​ ವಿರುದ್ಧ ಹೀನಾಯವಾಗಿ ಸೋತರು.

ಈಗ ಸೊರಬ ಕಾಂಗ್ರೆಸ್​ ಶಾಸಕರಾಗಿರುವ ಮಧು ಬಂಗಾರಪ್ಪ ಅವರನ್ನು ಜೆಡಿಎಸ್​ ಯುವ ಘಟಕದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ಮತ್ತು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಅವರು ನಿಖಿಲ್​ ಅವರನ್ನು ಆ ಹುದ್ದೆಗೆ ತಂದು ಕೂರಿಸಿದ್ದರು.

ವಿಧಾನಸಭೆ ಚುನಾವಣಾ ಫಲಿತಾಂಶ ಅತೀವ ಬೇಸರ ಉಂಟು ಮಾಡಿದೆ ಮತ್ತು ಜೊತೆಗೆ ಪಕ್ಷವನ್ನು ಹೊಸದಾಗಿ ಕಟ್ಟುವ ಹಲವು ಸಾಧ್ಯತೆಗಳನ್ನು ತೆರೆದಿದೆ ಎಂದು ನಿಖಿಲ್​ ಅವರು ಪತ್ರದಲ್ಲಿ ಹೇಳಿದ್ದಾರೆ.