ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಅವರ ನೇರ ಸಂಘರ್ಷಕ್ಕೆ ಕಾರಣವಾಗಿರುವ ರಾಮನಗರ ಜಿಲ್ಲೆಯಲ್ಲಿ 3 ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ.
ಆದರೆ ಡಿಕೆಶಿವಕುಮಾರ್ ಅವರು ಪ್ರತಿನಿಧಿಸುವ ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಕುಮಾರಸ್ವಾಮಿ ಅವರು ಅಭ್ಯರ್ಥಿಯನ್ನು ಪ್ರಕಟಿಸಿಲ್ಲ.
ಚನ್ನಪಟ್ಟಣದಿಂದ ಈ ಬಾರಿ ಮತ್ತೆ ಕುಮಾರಸ್ವಾಮಿ ಅವರೇ ಜೆಡಿಎಸ್ನಿಂದ ಸ್ಪರ್ಧಿಸ್ತಿದ್ದಾರೆ.
ರಾಮನಗರ ಕ್ಷೇತ್ರವನ್ನು ಅನಿತಾ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದಾರೆ.
ಮಾಗಡಿ ಕ್ಷೇತ್ರದ ಹಾಲಿ ಶಾಸಕ ಮಂಜುನಾಥ್ ಅವರಿಗೆ ಜೆಡಿಎಸ್ ಮತ್ತೆ ಟಿಕೆಟ್ ನೀಡಿದೆ.
ಕನಕಪುರಕ್ಕೆ ಡಿಕೆಶಿ ವಿರುದ್ಧ ಮುಂದಿನ ದಿನಗಳಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿ ಘೋಷಿಸುವ ನಿರೀಕ್ಷೆ ಇದೆ.
ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್ ಪತ್ನಿ ಜಿಲ್ ಬಿಡೆನ್ಗೆ ಪ್ರಧಾನಿ...
ಬೆಂಗಳೂರು ಮೂಲದ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಪುಣೆ ಮೂಲದ ಕಾಮೋಸ್ ಕೋ ಆಪರೇಟಿವ್ ಬ್ಯಾಂಕ್ನೊಂದಿಗೆ ವಿಲೀನಗೊಂಡಿದೆ. ಎರಡೂ ಕೋ-ಆಪರೇಟಿವ್ ಬ್ಯಾಂಕ್ಗಳ ವಿಲೀನ ಪ್ರಕ್ರಿಯೆಗೆ ಭಾರತೀಯ ರಿಸರ್ವ್...
ನಾಲ್ವರು ಐಎಎಸ್ ಅಧಿಕಾರಿಗಳನ್ನು ಕರ್ನಾಟಕ ಸರ್ಕಾರ ವರ್ಗಾವಣೆ ಮಾಡಿದೆ. ಅಬಕಾರಿ ಇಲಾಖೆ ಆಯುಕ್ತರಾಗಿದ್ದ ಡಾ ರವಿಶಂಕರ್ ಜೆ ಅವರನ್ನು ಕೃಷಿ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ...