ಹೊರಗುತ್ತಿಗೆ ಆಧಾರದಲ್ಲಿ 400 ಮಂದಿ ಖಾಸಗಿ ಚಾಲಕರನ್ನು (Private Drivers) ನೇಮಿಸಿಕೊಳ್ಳಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನಿರ್ಧರಿಸಿದೆ. ಈ ಸಂಬಂಧ ಟೆಂಡರ್ ಕರೆದು ಟೆಂಡರ್ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸದ್ಯ 1,200 ಚಾಲಕರ ಕೊರತೆ ಇರುವ ಹಿನ್ನೆಲೆಯಲ್ಲಿ ಹೊರಗುತ್ತಿಗೆ (Out Sourcing) ಮೂಲಕ ಭರ್ತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.
ಬಳ್ಳಾರಿ ಡಿಪೋ – 100, ಹೊಸಪೇಟೆ – 100, ಸಿಂಧನೂರು- 30, ಮಾನ್ವಿ – 20, ಗುರುಮಟ್ಕಲ್ – 30, ಯಾದಗಿರಿ – 20, ಗಂಗಾವತಿ – 30, ಚಿಂಚೋಳಿ – 30, ಸೇಡಂ- 30, ಚಿತ್ತಾಪುರ ಡಿಪೋದಲ್ಲಿ – 10 ಮಂದಿ ಖಾಸಗಿ ಚಾಲಕರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು ಸೆಪ್ಟೆಂಬರ್ 12 ಮತ್ತು 13ರಂದು ನಡೆದ ನಿಗಮದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲೂ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಚಾಲಕರ ಭರ್ತಿಗೆ ತೀರ್ಮಾನಿಸಲಾಗಿದೆ.
ADVERTISEMENT
ADVERTISEMENT