ಕಾರ್ಕಳ: ಇಬ್ಬರು BJP ಗ್ರಾಮ ಪಂಚಾಯತ್​ ಸದಸ್ಯರು ಪಕ್ಷದಿಂದ ಅಮಾನತು

ಕಾರ್ಕಳ ತಾಲೂಕಿನಲ್ಲಿ ಇಬ್ಬರು ಗ್ರಾಮ ಪಂಚಾಯತ್​ ಸದಸ್ಯರನ್ನು ಬಿಜೆಪಿ ಪಕ್ಷದಿಂದ ಅಮಾನತು ಮಾಡಲಾಗಿದೆ.

ನಿಟ್ಟೆ ಗ್ರಾಮ ಪಂಚಾಯತ್​ ಸದಸ್ಯ ಸುಭಾಶ್​ ಚಂದ್ರ ಹೆಗ್ಡೆ ಮತ್ತು ಮುದ್ರಾಡಿ ಗ್ರಾಮ ಪಂಚಾಯತ್​ ಸದಸ್ಯ ಶುಭಧರ್​ ಮುದ್ರಾಡಿ ಅವರನ್ನು ಬಿಜೆಪಿಯಿಂದ ಅಮಾನತು ಮಾಡಲಾಗಿದೆ.

ವಿಧಾನಸಭಾ ಚುನಾವಣೆಯ ವೇಳೆಗೆ ಶಾಸಕ ಸುನಿಲ್​ ಕುಮಾರ್​ ಅವರ ವಿರುದ್ಧ ಕೆಲಸ ಮಾಡುವ ಮೂಲಕ ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ಕಾರ್ಕಳ ಬಿಜೆಪಿ ಅಧ್ಯಕ್ಷ ಮಹಾವೀರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here