ADVERTISEMENT
ರಾಜ್ಯ ಸರ್ಕಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಿದೆ. ನಾಳೆ ಅಂದರೆ ಬುಧವಾರ ಡಿಸೆಂಬರ್ 11ರಂದು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು ಮತ್ತು ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅನುದಾನಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.
ಇವತ್ತಿನಿಂದ ಗುರುವಾರ ಅಂದರೆ ಡಿಸೆಂಬರ್ 12ರವರೆಗೂ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಲಾಗಿದೆ. ಈ ಮೂರು ದಿನ ರಾಜ್ಯದಲ್ಲಿ ಯಾವುದೇ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳು, ಸಮಾರಂಭಗಳು ನಡೆಯಲ್ಲ. ಈ ಮೂರು ದಿನ ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುತ್ತದೆ.
ADVERTISEMENT