ಮಾಜಿ ಮುಖ್ಯಮಂತ್ರಿ B S ಯಡಿಯೂರಪ್ಪ ವಿರುದ್ಧದ FIR ರದ್ದು – ಹೈಕೋರ್ಟ್​ ಆದೇಶ

ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ವಿರುದ್ಧ ಅಕ್ರಮ ಡಿನೋಟಿಫಿಕೇಷನ್​ ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್​ ರದ್ದುಗೊಳಿಸಿದೆ.
2006ರಲ್ಲಿ ಯಡಿಯೂರಪ್ಪ ಅವರು ಸಿಎಂ ಆಗಿದ್ದ ವೇಳೆ ಬೆಂಗಳೂರಿನ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿಯಲ್ಲಿ 15 ಎಕರೆ 30 ಗುಂಟೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ್ದರು ಎಂಬ ಆರೋಪದಡಿಯಲ್ಲಿ ಎಫ್​ಐಆರ್​ ದಾಖಲಾಗಿತ್ತು.
ಮಹಾಲೆಕ್ಕ ಪರಿಶೋಶಧಕರ ವರದಿ ಆಧರಿಸಿ ಕರ್ನಾಟಕ ಹೈಕೋರ್ಟ್​ನಲ್ಲಿ ಯಡಿಯೂರಪ್ಪ ಅವರು ಎಫ್​ಐಆರ್​ ರದ್ದತಿ ಕೋರಿ ಅರ್ಜಿ ಸಲ್ಲಿಸಿದ್ದರು.
ಎಫ್​ಐಆರ್​ ರದ್ದುಗೊಳಿಸಿ ಹೈಕೋರ್ಟ್​ನ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ಸಿಎಜಿ ವರದಿ ಆಧರಿಸಿ ಕ್ರಿಮಿನಲ್​ ಪ್ರಕರಣ ದಾಖಲಿಸಲು ಆಧಾರವಲ್ಲ ಎಂದು 2015ರಲ್ಲಿ ಕರ್ನಾಟಕ ಹೈಕೋರ್ಟ್​ ನೀಡಿದ್ದ ತೀರ್ಪನ್ನು ಆದೇಶವನ್ನು ಉಲ್ಲೇಖಿಸಿ ಪ್ರಕರಣ ರದ್ದುಗೊಳಿಸಲಾಗಿದೆ.
ವಿಭಾಗೀಯ ಪೀಠ 2015ರಲ್ಲಿ ನೀಡಿದ್ದ ಅದೇಶವನ್ನು ಪ್ರತಿವಾದಿಗಳು ಕೂಡಾ ಆಕ್ಷೇಪಿಸಿಲ್ಲದ ಕಾರಣ ಯಡಿಯೂರಪ್ಪ ವಿರುದ್ಧದ ಪ್ರಕರಣವನ್ನು ಹೈಕೋರ್ಟ್​ ರದ್ದುಗೊಳಿಸಿದೆ.