ಪುತ್ತೂರಿನಲ್ಲಿ ಬಿಜೆಪಿ ಸೋಲಿನ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಸಂಸದ ಡಿ ವಿ ಸದಾನಂದಗೌಡ ಅವರ ವಿರುದ್ಧ ಪೋಸ್ಟರ್ ಹಾಕಿದ್ದ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ಮನಬಂದಂತೆ ಥಳಿಸಿದ್ದಾರೆ.
ಈ ಇಬ್ಬರು ನಾಯಕರ ಪೋಸ್ಟರ್ಗೆ ಚಪ್ಪಲಿ ಹಾರ ಹಾಕಿ ಘೋಷಣೆ ಬರೆದಿದ್ದ ಬಿಜೆಪಿ ಕಾರ್ಯಕರ್ತರನ್ನು ಕರೆದುಕೊಂಡು ಹೋದ ಪುತ್ತೂರು ಪೊಲೀಸರು ಚರ್ಮ ಕಿತ್ತು ಹೋಗುವಂತೆ ಬಾರಿಸಿದ್ದಾರೆ. ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿದ್ದಾರೆ.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.
ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ. ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ. ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು.
ಎಂದು ಟ್ವೀಟಿಸಿದ್ದಾರೆ.
ADVERTISEMENT
ADVERTISEMENT