ADVERTISEMENT
242 ಹುದ್ದೆಗಳ ನೇಮಕಾತಿ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗ ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿರುವ ಉಳಿಕೆ ಮೂಲ ವೃಂದದ 242 ಲೆಕ್ಕ ಸಹಾಯಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಮಾರ್ಚ್ 23ರಿಂದ ಅರ್ಜಿ ಸಲ್ಲಿಕೆ ಆರಂಭ ಆಗಲಿದ್ದು, ಏಪ್ರಿಲ್ 23 ಅರ್ಜಿ ಸಲ್ಲಿಕೆಗೆ ಕೊನೆಯ ದಿನ. ಏಪ್ರಿಲ್ 24 ಶುಲ್ಕ ಪಾವತಿಗೆ ಕೊನೆಯ ದಿನ.
ವೇತನ ಶ್ರೇಣಿ: 27,650 ರೂ.ಗಳಿಂದ 52,650 ರೂ.
ವಿದ್ಯಾರ್ಹತೆ: ಬಿಕಾಂ, ಬಿಬಿಎ ಮತ್ತು ಬಿಬಿಎಂ ಪದವೀಧರರು.
ಗ್ರೂಪ್ ಸಿ ಹುದ್ದೆಯಾಗಿರುವ ಕಾರಣ ಎರಡು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಶುಲ್ಕ:
ಸಾಮಾನ್ಯ ಅಭ್ಯರ್ಥಿಗೆ: 600 ರೂ., ಹಿಂದುಳಿದ ಅಭ್ಯರ್ಥಿಗಳಿಗೆ – 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 50 ರೂ.
ಪರಿಶಿಷ್ಟ ಜಾತಿ, ಪಂಗಡ ಮತ್ತು ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಈ ಲಿಂಕ್ಗೆ ಕ್ಲಿಕ್ ಮಾಡಿ. https://kpsc.kar.nic.in/
ADVERTISEMENT