ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾಗಿದ್ದ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲೂ ಹಿಂದಿ ಹೇರಿಕೆಯನ್ನು ಚಾಳಿಯನ್ನು ಸಿಎಂ ಸಿದ್ದರಾಮಯ್ಯ ಅವರ ಸರ್ಕಾರವೂ ಮುಂದುವರಿಸಿದೆ.
ಕೆಎಸ್ಆರ್ಟಿಸಿ ಬಸ್ಗಳ ಮಾರ್ಗ ಫಲಕಗಳಲ್ಲಿ ಕನ್ನಡ ಮತ್ತು ಇಂಗ್ಲೀಷ್ ಜೊತೆಗೆ ಹಿಂದಿಯನ್ನೂ ಬಳಸುವುದನ್ನು ಸಮರ್ಥಿಸಿಕೊಂಡು ಮಂಗಳೂರು-3ನೇ ಘಟಕದ ಡಿಪೋ ಮ್ಯಾನೇಜರ್ ಉತ್ತರ ನೀಡಿದ್ದಾರೆ.
ಉತ್ತರ ಭಾರತದಿಂದ ಮಂಗಳೂರು ಕಡೆಗೆ ಬರುವ ಪ್ರಯಾಣಿಕರಿಗೆ ಕನ್ನಡ ಮತ್ತು ಇಂಗ್ಲೀಷ್ ಭಾಷೆ ಬಾರದ್ದೇ ಇದ್ದಲ್ಲಿ ಅವರಿಗೆ ಅನುಕೂಲವಾಗಲು ನಮ್ಮ ರಾಷ್ಟ್ರಭಾಷೆ ಹಿಂದಿಯನ್ನು ಸೇರಿಸಿರುತ್ತಾರೆ