BREAKING: ಸಾರಿಗೆ ನೌಕರರ ಮುಷ್ಕರ ವಾಪಸ್​

KSRTC

ಮಾರ್ಚ್​ 21ರಂದು ಕರೆ ನೀಡಿದ್ದ ಮುಷ್ಕರವನ್ನು ನಾಲ್ಕೂ ಸಾರಿಗೆ ನಿಗಮಗಳ ಸಿಬ್ಬಂದಿ ವಾಪಸ್​ ಪಡೆದಿದ್ದಾರೆ.

ಮೂರು ಪ್ರಮುಖ ಬೇಡಿಕೆಗಳನ್ನೂ ಈಡೇರಿಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್​ ಪಡೆಯಲಾಗಿದೆ.

ವೇತನ ಹೆಚ್ಚಳವನ್ನು 2020ರ ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೊಳಿಸುವುದಕ್ಕೆ ಸರ್ಕಾರ ಒಪ್ಪಿಕೊಂಡಿದೆ.

ಮುಷ್ಕರದ ವೇಳೆ ವಜಾಗೊಂಡಿದ್ದ ನೌಕರರನ್ನು ವಾಪಸ್​ ಸೇವೆಗೆ ಸೇರಿಸಿಕೊಳ್ಳಲು ಸರ್ಕಾರ ಒಪ್ಪಿದೆ.

ವಾರ್ಷಿಕ ವೇತನದ ಬಡ್ತಿ ಹೆಚ್ಚಳಕ್ಕೂ ಸರ್ಕಾರ ಒಪ್ಪಿಕೊಂಡಿದೆ.

ಇವತ್ತು ಸಂಜೆ 5 ಗಂಟೆಯಿಂದ ಸಾರಿಗೆ ಸಿಬ್ಬಂದಿಯ 8 ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಸುಬ್ಬರಾವ್​ ಅವರ ಜೊತೆಗೆ ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್​ ನಡೆಸಿರುವ ಮಾತುಕತೆ ಯಶಸ್ವಿಯಾಗಿದೆ.

LEAVE A REPLY

Please enter your comment!
Please enter your name here