ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟಾಧಿಕಾರಿಗಳು ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿ ರಾಜ್ಯದ ಹಲವೆಡೆ ದಾಳಿ ನಡೆಸಿದೆ.
13 ಅಧಿಕಾರಿಗಳಿಗೆ ಸೇರಿದ 63 ಕಡೆ ದಾಳಿ ನಡೆಸಿದ್ದು, ಬೆಂಗಳೂರಿನಲ್ಲಿ ಮೂರು ಕಡೆ ದಾಳಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಸುಮಾರು 200 ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ಪರಿಶೀಲನೆ ನಡೆಸಿದ್ದಾರೆ.
1. ಸುಧಾಕರ್ ರೆಡ್ಡಿ S/o ಚಿಕ್ಕನಾರಾಯಣ ರೆಡ್ಡಿ. ಇಇ(ಎಲೆಕ್ಟ್ರಿಕ್) ಬೆಸ್ಕಾಂ, ಕೆಆರ್ ಸರ್ಕಲ್, ವಿಜಿಲೆನ್ಸ್, ಬೆಂಗಳೂರು
2. ಎಚ್ ಎಸ್ ಕೃಷ್ಣಮೂರ್ತಿ, ಕಣ್ಮಿಣಿಕೆ ಹಾಲು ಉತ್ಪಾದಕರ ಸಹಕಾರ ಸಂಘ, ಕುಂಬಳಗೋಡು, ಬೆಂಗಳೂರು ದಕ್ಷಿಣ
3. ಎಚ್ ಡಿ ನಾರಾಯಣ ಸ್ವಾಮಿ, ನಿವೃತ್ತ ವೈಸ್ ಚಾನ್ಸಲರ್, ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯ, ಬೀದರ್
೪.ಸುನೀಲ್ ಕುಮಾರ್, ಸಹಾಯಕ (ಔಟ್ ಸೋರ್ಸ್), ಹಣಕಾಸು ಕಚೇರಿಯ ನಿಯಂತ್ರಕರು, ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯ, ಬೀದರ್.
5.ಡಾ.ಪ್ರಭುಲಿಂಗ್, DHO ಯಾದಗಿರಿ