ADVERTISEMENT
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಚಿವ ಬಿ ನಾಗೇಂದ್ರ ಅವರ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಸಚಿವ ನಾಗೇಂದ್ರ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಆ ಅರ್ಜಿಯ ವಿಚಾರಣೆಗೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸಮ್ಮತಿಸಿದೆ.
ಜುಲೈ 8ರಂದು ಹೈಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ. ಅಲ್ಲಿಯವರೆಗೆ ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸೂಚಿಸಿರುವ ಹೈಕೋರ್ಟ್ ಸಚಿವ ನಾಗೇಂದ್ರ ಸಲ್ಲಿಸಿರುವ ಅರ್ಜಿ ಸಂಬಂಧ ಅಭಿಪ್ರಾಯ ತಿಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ.
ಅರ್ಜಿದಾರ ಸಚಿವ ನಾಗೇಂದ್ರ ವಾದವೇನು..?
ಆರೋಪಿಸಲಾಗಿರುವ ಕೃತ್ಯ ನಡೆದಿರುವುದು 2009 ಮತ್ತು 2010ರ ನಡುವೆ. ಆದರೆ ದೂರು ಸಲ್ಲಿಕೆ ಆಗಿರುವುದು 2023ರಲ್ಲಿ. ಹೀಗಾಗಿ ಈ ದೂರಿನ ಬಗ್ಗೆ ವಿಚಾರಣೆ ನಡೆಸುವುದು ಜನಪ್ರತಿನಿಧಿಗಳ ನ್ಯಾಯಾಲಯದ ವ್ಯಾಪ್ತಿಗೆ ಬರಲ್ಲ.
ಇದೇ ತಿಂಗಳು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಸಚಿವ ನಾಗೇಂದ್ರ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತು ಇತರೆ 10 ಮಂದಿ ವಿರುದ್ಧ ಅಕ್ರಮ ಗಣಿಗಾರಿಕೆ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಿಸಿತ್ತು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ರಾಜಧನ ಪಾವತಿಸದೇ ಮತ್ತು ಅನುಮತಿ ಪಡೆಯದೇ 22.82 ಮೆಟ್ರಿಕ್ ಟನ್ನ್ನಷ್ಟು ಕಬ್ಬಿಣದ ಅದಿರು ಮಾರಾಟ ಮಾಡಿದ ಆರೋಪ ಇದೆ.
ADVERTISEMENT