Friday, May 16, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಆಡಳಿತ ಯಂತ್ರದ ದುರ್ಬಳಕೆ : ಡಿವೈಎಫ್ಐ ಖಂಡನೆ

by
31st August 2022
in News
0
ಮಂಗಳೂರು SEZನಲ್ಲಿ ಸ್ಥಳೀಯರಿಗೆ ಉದ್ಯೋಗ ಇಲ್ಲ, ಅಲ್ಲಿ ಈಶಾನ್ಯ ಕಾರ್ಮಿಕರ ಜೀತ – ಮುನೀರ್ ಕಾಟಿಪಳ್ಳ ಕಿಡಿ
0
SHARES
0
VIEWS
Share on FacebookShare on Twitter

ಸೆಪ್ಟೆಂಬರ್ 2 ರಂದು ಮಂಗಳೂರಿನಲ್ಲಿ ಆಯೋಜಿಸಲಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿಸಲು ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳ ಇಡೀ ಆಡಳಿತ ಯಂತ್ರವನ್ನೇ ಬಳಸಿಕೊಳ್ಳಲಾಗುತ್ತಿದ್ದು, ಜಿಲ್ಲಾಡಳಿತವೇ ಮುಂದೆ ನಿಂತು ಜನರನ್ನು ಪ್ರಧಾನಿ ಸಭೆಗೆ ಬರುವಂತೆ ಬಲಪ್ರಯೋಗ ಮಾಡುತ್ತಿದೆ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಆರೋಪಿಸಿದೆ.

ನರೇಂದ್ರ ಮೋದಿಯವರ ಕಾರ್ಯಕ್ರಮಗಳು ನೇರವಾಗಿ ಜನಸಾಮಾನ್ಯರಿಗೆ ಸಂಬಂಧ ಪಟ್ಟದ್ದಲ್ಲ. ಬಂದರು ಹಾಗೂ ಎಮ್ಆರ್ ಪಿಎಲ್ ನ ಅಭಿವೃದ್ದಿ ಕಾರ್ಯಕ್ರಮಗಳಿಗೆ ಸರಕಾರಿ ಯೋಜನೆಗಳ ಫಲಾನುಭವಿಗಳನ್ನು ಜೋಡಿಸಿ ಪರೋಕ್ಷವಾಗಿ ಬಿಜೆಪಿಯ ಸಾರ್ವಜನಿಕ ಸಭೆಯನ್ನು ನಡೆಸಲಾಗುತ್ತಿದೆ. ಗೋಲ್ಡ್ ಫಿಂಚ್ ಮೈದಾನ ದುರಸ್ತಿಗೊಳಿಸಲು, ಪೆಂಡಾಲ್, ವೇದಿಕೆ ನಿರ್ಮಾಣ ಸಹಿತ ಕಾರ್ಯಕ್ರಮದ ಸಿದ್ದತೆಗೆ ಜನರ ತರಿಗೆಯ ಹಣದಿಂದ ಹತ್ತಾರು ಕೋಟಿ ರೂಪಾಯಿಗಳನ್ನು ಎಗ್ಗಿಲ್ಲದೆ ಬಳಸಲಾಗುತ್ತಿದೆ. ಬಿಜೆಪಿ ಸರಕಾರದ ವಿರುದ್ದದ ಅಲೆ ದ. ಕ. ಉಡುಪಿ ಜಿಲ್ಲೆಗಳಲ್ಲಿ ಬಲವಾಗಿ ಬೀಸುತ್ತಿರುವುದರಿಂದ ಜನ ಸೇರದಿರುವ ಸಾಧ್ಯತೆಗಳನ್ನು ಮನಗಂಡು ಎರಡೂ ಜಿಲ್ಲೆಗಳ ಇಡೀ ಆಡಳಿತ ಯಂತ್ರವನ್ನು ಪ್ರಧಾನಿಗಳ ಸಭೆಗೆ ಜನ ಸೇರಿಸಲು ನಿರ್ಲಜ್ಜವಾಗಿ ಬೀದಿಗಿಳಿಸಲಾಗಿದೆ. ಸರಕಾರದ ಎಲ್ಲಾ ಇಲಾಖೆಗಳಲ್ಲಿ ಡುಡಿಯುತ್ತಿರುವವರು, ಬ್ಯಾಂಕ್ ನೌಕರರಿಗೂ ಜನ ಸೇರಿಸುವುದು ಮತ್ತು ಸ್ವತಹ ಹಾಜರಿರುವುದನ್ನು ಕಡ್ಡಾಯಗೊಳಿಸಲಾಗಿದೆ.

ಸ್ವಸಹಾಯ ಗುಂಪುಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಖುದ್ದು ಹಾಜರಿರುವಂತೆ ಸೂಚನೆ ಹೊರಡಿಸಲಾಗಿದೆ. ವೃದ್ದರು, ಅನಾರೋಗ್ಯ ಪೀಡಿತರು, ಅಂಗ ವಿಕಲರು ಎಂದು ನೋಡದೆ ಸರಕಾರಿ ಯೋಜನೆಗಳ ಫಲಾನುಭವಿಗಳನ್ನು ಪಂಚಾಯತ್ ಮಟ್ಟದಿಂದಲೆ ಕಡ್ಡಾಯ ಹಾಜರಿರುವಂತೆ ನೋಡಿಕೊಳ್ಳಲು ಸುತ್ತೋಲೆಗಳನ್ನು ಹೊರಡಿಸಿರುವುದು, ಫಲಾನುಭವಿಗಳ ಜೊತೆಗೆ ಸಾರ್ವಜನಿಕರನ್ನೂ ಕರೆ ತರಲು ಪಂಚಾಯತ್ ಸಿಬ್ಬಂದಿಗಳಿಗೆ ಟಾರ್ಗೆಟ್ ಗಳನ್ನು ಫಿಕ್ಸ್ ಮಾಡಿರುವುದು, ವಾಹನಗಳನ್ನು ಒದಗಿಸಿರುವುದು ಎಂದೂ ಕಂಡು ಕೇಳರಿಯದ ವಿದ್ಯಾಮಾನ. ಒಟ್ಟು ಎಲ್ಲಾ ವಿಭಾಗಗಳನ್ನು ಬೆದರಿಸಿ ಕಾರ್ಯಕ್ರಮಕ್ಕೆ ಬರುವಂತೆ ಮಾಡುತ್ತಿರುವುದು ಕಣ್ಣಿಗೆ ಕಾಣುವಂತೆ ನಡೆಯುತ್ತಿದೆ. ಸ್ವತಹ ದಕ್ಷಿಣ ಕ‌ನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳೇ ಪತ್ರಿಕಾಗೋಷ್ಟಿ ನಡೆಸಿ ಒಂದೂವರೆ ಲಕ್ಷ ಜನ ಸೇರುತ್ತಾರೆ ಎಂದು ಘೋಷಿಸಿರುವುದು ಆಡಳಿತ ಯಂತ್ರದ ದುರುಪಯೋಗ ನಡೆಯುತ್ತಿರುವುದಕ್ಕೆ ಪ್ರಬಲ ಸಾಕ್ಷಿ.‌

ADVERTISEMENT

ಇದನ್ನೂ ಓದಿ : ವಿದ್ಯಾರ್ಥಿ ಪೂರ್ವಜ್ ಸಾವು : ಶಾಲೆ ಮೇಲೆ ಕೊಲೆ ಕೇಸ್ ದಾಖಲಿಸಲು ಡಿವೈಎಫ್ಐ ಒತ್ತಾಯ

ಫಲಾನುಭವಿಗಳ ಯಾವುದೆ ಹೊಸ ಯೋಜನೆಗಳು ಇಲ್ಲದ, ಖಾಸಗಿ ಕಾರ್ಪೊರೇಟ್ ಕಂಪೆನಿಗಳ ಹಿತಾಸಕ್ತಿಗಳನ್ನು ಹೊಂದಿರುವ ಬಂದರಿನ ಸಾಮಾನ್ಯ ಬರ್ತ್ ಉದ್ಘಾಟನೆಯ ಕಾರ್ಯಕ್ರಮಕ್ಕೆ ಸರಕಾರದ ಯೋಜನೆಗಳ ಹಳೆಯ ಫಲಾನುಭವಿಗಳ ಸಹಿತ ಎಲ್ಲಾ ವಿಭಾಗದ ಜನರನ್ನು ಬಲ ಪ್ರಯೋಗಿಸಿ ಮೈದಾನಕ್ಕೆ ಕರೆತರುವ ಅಗತ್ಯ ಏನಿದೆ ? ಮಳೆ ಸಂತ್ರಸ್ತರಿಗೆ ಪರಿಹಾರಗಳು ಸರಿಯಾಗಿ ವಿತರಣೆ ಆಗದೆ ಜನ ಸಂಕಷ್ಟದಲ್ಲಿ ಇರುವಾಗ ಅವರನ್ನು ಅಣಕಿಸುವಂತೆ ಹತ್ತಾರು ಕೋಟಿ ರೂಪಾಯಿ ಸುರಿದು ಸರಕಾರ ಪ್ರಧಾ‌ನಿಗಳ ಸಭೆ ನಡೆಸುವ ಔಚಿತ್ಯ ಏನು ? ಪ್ರಧಾನಿಗಳು ತುಳುನಾಡಿನ ಜನರ ಯಾವ ಪ್ರಧಾನ ಬೇಡಿಕೆಗಳನ್ನು‌ ಈಡೇರಿಸುವ ಘೋಷಣೆ ಇಲ್ಲಿ ಮಾಡಲಿದ್ದಾರೆ ? ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ, ಉದ್ಯೋಗಕ್ಕೆ ಸಂಬಂಧಿಸಿ ಯಾವುದಾದರು ಯೋಜನೆಗಳು ಘೋಷಣೆ ಆಗಲಿದೆಯೆ ? ಎಮ್ಆರ್ ಪಿಎಲ್ ಸಹಿತ ಅವಿಭಜಿತ ಜಿಲ್ಲೆಯ ಉದ್ಯಮಗಳಲ್ಲಿ ಸ್ಥಳೀಯರ ಉದ್ಯೋಗಾವಕಾಶಗಳ ಕುರಿತು, ರಾಷ್ಟ್ರೀಯ ಹೆದ್ದಾರಿ, ಟೋಲ್ ಗೇಟ್ ಸಮಸ್ಯೆಗಳ ಕುರಿತು ಪ್ರಧಾನಿ ಯಾವುದಾದರು ಪರಿಹಾರ ಒದಗಿಸುವ ಮಾತುಗಳನ್ನು ಆಡುತ್ತಾರಾ ? ಪ್ರಧಾನಿಗಳು ಲೋಕಾರ್ಪಣೆ ಮಾಡಲಿರುವ ಬಂದರಿನ ಬರ್ತ್, ಎಮ್ಅರ್ ಪಿಎಲ್ ನ 655 ಕೋಟಿ ರೂಪಾಯಿ ವೆಚ್ಚದ ನೀರು ಶುದ್ದೀಕರಣ ಘಟಕಗಳಾದರು ಸೃಷ್ಟಿ ಮಾಡಿರುವ ಉದ್ಯೋಗಗಳು ಎಷ್ಟು ? ಅದರಲ್ಲಿ‌ ಸ್ಥಳೀಯರಿಗೆ ಎಷ್ಟು ಉದ್ಯೋಗಗಳು ಲಭ್ಯ ಆಗಲಿವೆ ಎಂಬುದನ್ನಾದರು ಪ್ರಾಧಾನಿ ಭಾಷಣದಲ್ಲಿ ಹೇಳಿಸಲು ಸಾಧ್ಯವೆ ?

ADVERTISEMENT

ಹಾಗಾಗಿದ್ದರೆ ಜನರು ಸ್ವಯಂ ಪ್ರೇರಣೆಯಿಂದ ಸಭೆಗೆ ಆಗಮಿಸುತ್ತಿದ್ದರು. ಜನರ ಬೇಡಿಕೆಗಳಿಂದ ಅದರಲ್ಲೂ ತುಳುನಾಡಿನ‌ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹುಡುಕುವುದರಲ್ಲಿ ಉದ್ದೇಶಪೂರ್ವಕವಾಗಿ ಸೋತಿರುವ ಬಿಜೆಪಿ ಸರಕಾರ ಹಾಗೂ ಜನಪ್ರತಿನಿಧಿಗಳಿಂದ ಜನರು ಸಹಜವಾಗಿಯೇ ದೂರವಾಗಿದ್ದಾರೆ. ಕಳೆದು ಹೋಗಿರುವ ವರ್ಚಸ್ಸನ್ನು ಸರಿಪಡಿಸಲು ಬಿಜೆಪಿ ಪರಿವಾರ ಈಗ ಪ್ರಧಾನಿ ನರೇಂದ್ರ ಮೋದಿ ಸಭೆ ಯಶಸ್ಸುಗೊಳಿಸುವ ಅನಿವಾರ್ಯತೆಯನ್ನು ಎದುರಿಸುತ್ತಿದೆ. ಅದಕ್ಕಾಗಿ ಎಂದೂ ಕಂಡು ಕೇಳರಿಯದ ರೀತಿಯಲ್ಲಿ ಜಿಲ್ಲಾಡಳಿತಗಳನ್ನು ಬಳಸಿಕೊಳ್ಳುತ್ತಿದೆ. ಜನರನ್ನು ಬಲವಂತದಿಂದ ಸಭೆಯಲ್ಲಿ ಕೂಡಿಹಾಕಲು ಯತ್ನಿಸುತ್ತಿದೆ, ಇದು ಖಂಡನೀಯ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿಕೆಯಲ್ಲಿ ತಿಳಿಸಿದ್ದಾರೆ‌.

ಇದನ್ನೂ ಓದಿ : ಖಾಸಗೀ ಬಸ್ ಪ್ರಯಾಣ ದರ ಏರಿಕೆ ವಿರೋಧಿಸಿ ಜುಲೈ 31 ಡಿವೈಎಫ್ಐ, ಸಿಪಿಐಎಂನಿಂದ ಪ್ರತಿಭಟನೆ

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
ADVERTISEMENT
Previous Post

ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಕಾರು ಅಪಘಾತ : ಪ್ರಾಣಾಪಾಯದಿಂದ ಪಾರು

Next Post

Paola Maino : ಕಾಂಗ್ರೆಸ್​​ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ನಿಧನ

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
Paola Maino

Paola Maino : ಕಾಂಗ್ರೆಸ್​​ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ನಿಧನ

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!