ಲೈಂಗಿಕ ಕಿರುಕುಳ ನೀಡಿದ ಬಿಜೆಪಿ ಸಂಸದನ ಬಂಧನಕ್ಕೆ ಆಗ್ರಹಿಸಿ ಹೋರಾಟ ತೀವ್ರಗೊಳಿಸಿದ್ದಾರೆ.
ಮಹಿಳಾ ಕುಸ್ತಿಪಟುಗಳನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಡೆಸಿಕೊಳ್ಳುತ್ತಿರುವ ವರ್ತನೆ ಬಗ್ಗೆ ರಾಷ್ಟ್ರಪ್ರಶಸ್ತಿ ವಿಜೇತ ಮಂಸೋರೇ ಅವರು ಬರೆದಿದ್ದಾರೆ.
ಸೂಚನೆ : ವಾಟ್ಸಪ್ ಪದವೀಧರರು ದಯವಿಟ್ಟು ಈ ಪೋಸ್ಟ್ ಓದಬೇಡಿ. ಓದಿ ಇಲ್ಲಿ ಪ್ರತಿಕ್ರಿಯೆ ಬರೆಯಬೇಡಿ. ಇದು ಮನುಷ್ಯತ್ವಕ್ಕೆ ಪ್ರಜಾಪ್ರಭುತ್ವಕ್ಕೆ ಸ್ಪಂದಿಸುವವರೊಂದಿಗೆ ಮಾತ್ರ ಹಂಚಿಕೊಂಡಿರುವುದು.
ಕುಸ್ತಿಪಟುಗಳು ಇಂದು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದ ಪತ್ರವನ್ನು ಓದಿ ಕಣ್ತುಂಬಿಕೊಳ್ತು.
ಬಹುಶಃ ಜಗತ್ತಿನಲ್ಲಿ ಭಾರತದಲ್ಲಿ ಮಾತ್ರ ನ್ಯಾಯ ಕೇಳುವವರೇ ಅಪರಾಧಿಗಳಾಗುತ್ತಾರೆ ಎಂದು ಅನಿಸುತ್ತಿದೆ. ರಕ್ಷಣೆ ನೀಡಿ, ಅವರ ನೋವಿಗೆ ಸ್ಪಂದಿಸಬೇಕಾದ ಸರ್ಕಾರ ಆರೋಪಿಯನ್ನು ಸ್ವತಃ ರಕ್ಷಿಸುವ ಪಣತೊಟ್ಟಿರುವಾಗ ಯಾರೇನು ಮಾಡಲು ಸಾಧ್ಯ ಎಂಬ ಹತಾಷ ಭಾವ ಮೂಡುತ್ತಿದೆ.
ಪೋಕ್ಸೋ ಆಪಾದಿತನನ್ನು ಪ್ರಜಾಪ್ರಭುತ್ವವನ್ನು ಕಾಪಾಡಬೇಕಾದ ಅತ್ಯುನ್ನತ ಸ್ಥಳವಾದ ಲೋಕಸಭೆಗೆ ಗೌರವ ಕೊಟ್ಟು ಆಹ್ವಾನಿಸುವವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಸ್ವತಃ ಮಹಿಳೆಯಾಗಿ, ಪ್ರತಿಭಟನೆ ನಡೆಯುತ್ತಿರುವ ಸ್ಥಳದಿಂದ ಕೇವಲ ಎರಡೇ ಕಿ.ಮೀ ದೂರದಲ್ಲಿ ಮೌನವಾಗಿ ಕೂತಿರುವ ರಾಷ್ಟ್ರಪತಿಗಳಿರುವಂತಹ ಈ ದೇಶದಲ್ಲಿ ನ್ಯಾಯ ಮರೀಚಿಕೆಯಾಗುತ್ತಿದೆ.
ನೊಂದವರ ಪರವಾಗಿ ಇರಬೇಕಾದ ದೇಶದ ಜನತೆಯಲ್ಲಿ ಬಹುಪಾಲು ಜನರು ಪಕ್ಷ ನಾಯಕನೆಂಬ ಕಣ್ಣಿಗೆ ಪಟ್ಟಿ ಕಟ್ಟಿಕೊಂಡು ಆ ನೊಂದ ಮಹಿಳೆಯರನ್ನೇ ದೂಷಿಸುತ್ತಿರುವಾಗ ಹತಾಷೆ, ನೋವು ಸಂಕಟವನ್ನು ಅನುಭವಿಸದೇ ಬೇರೇನು ಮಾಡಲು ಸಾಧ್ಯ?
ಕಾರ್ಕಳ: ಬೈಲೂರು-ಎರ್ಲಪ್ಪಾಡಿ ಉಮಿಕಲ್ಲು ಬೆಟ್ಟದಲ್ಲಿ ಸ್ಥಾಪಿಸಿದ ಪರಶುರಾಮ ಮೂರ್ತಿಯ ವಾಸ್ತವ್ಯ ವಿಚಾರ ಮರೆಮಾಚುವ ಪ್ರಯತ್ನವಾಗಿ ಶಾಸಕ ಸುನೀಲ್ ಕುಮಾರ್ ವಿಷಯಾಂತರ ಮಾಡುವುದರೊಂದಿಗೆ ನೂರಾರು ಬಾರಿ ಸುಳ್ಳನ್ನೇ ಸತ್ಯವನ್ನಾಗಿರಿಸುವ ಪ್ರಯತ್ನ ನಡೆಸುತ್ತಿದ್ದಾರೆ. ರಾಜಕೀಯ ನಡೆಯಲಿ...
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ರಾಜ್ಯ ಸರ್ಕಾರ ಇಲಾಖಾ ತನಿಖೆಗೆ ಆದೇಶ ನೀಡಿದೆ.
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಜಿಲ್ಲಾಧಿಕಾರಿ ನಿವಾಸ ನವೀಕರಣ ಮತ್ತು ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪ ರೋಹಿಣಿ...
ಕರ್ನಾಟಕದಲ್ಲಿ ಬಿಜೆಪಿಗೆ ಭವಿಷ್ಯ ಇಲ್ಲ ಎಂದಿರುವ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಸುಕುಮಾರ್ ಶೆಟ್ಟಿ ಅವರು ಶೀಘ್ರವೇ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ.
ಕಾಂಗ್ರೆಸ್ ಸೇರುವ ಸಂಬಂಧ ಉಪಮುಖ್ಯಮಂತ್ರಿಗಳೂ ಆಗಿರುವ ಕೆಪಿಸಿಸಿ ಅಧ್ಯಕ್ಷ...
ಗಣೇಶೋತ್ಸವಕ್ಕೆ ಎರಡು ಲಕ್ಷ ರೂಪಾಯಿ ಕೊಡುವಂತೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಜಯರಾಮ್ ಅಮೀನ್ ಅವರ ಕಚೇರಿಗೆ ನುಗ್ಗಿ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಇತರರು ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.
ಬಿಜೆಪಿ ಶಾಸಕ...
ಬೆಳ್ತಂಗಡಿ ತಾಲೂಕಿನ ಅನಿಲ್ ಪ್ರವೀಣ್ ಪಿರೇರಾ ಎಂಬವರು ಕಾಣೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಕೊಲ್ಪದಬೈಲು ನಿವಾಸಿಯಾಗಿರುವ ಲವಿಟ ಡಿಸೋಜಾ ಅವರು ತಮ್ಮ ಪತಿ ಅನಿಲ್ ಪ್ರವೀಣ್...
ದಿವಂಗತ ಬಿಜೆಪಿ ನಾಯಕ ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ಕುಮಾರ್ ಅವರು ಬೆಂಗಳೂರಲ್ಲಿ ಉಪ ಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಈ ಬಗ್ಗೆ ಬೆಂಗಳೂರು...
ಕಾಂಗ್ರೆಸ್ ಒಳಗೊಂಡ 26 ವಿರೋಧ ಪಕ್ಷಗಳ ಮೈತ್ರಿಕೂಟ ಲೋಕಸಭಾ ಚುನಾವಣೆಗೆ ಇಂಡಿಯಾ ಮೈತ್ರಿಕೂಟವನ್ನು ರಚಿಸಿಕೊಂಡಿವೆ. ಆದಷ್ಟು ಬೇಗ ರಾಜ್ಯಗಳಲ್ಲಿ ಲೋಕಸಭಾ ಸೀಟುಗಳ ಹಂಚಿಕೆ ಸಂಬಂಧ ನಿರ್ಧಾರ ಕೈಗೊಳ್ಳುವ ಬಗ್ಗೆ ಮುಂಬೈನಲ್ಲಿ ನಡೆದ ಮೂರನೇ...
ದೇಶದ ಅತ್ಯಂತ ದುಬಾರಿ ವಕೀಲ ಎಂದೇ ಖ್ಯಾತಿ ಪಡೆದಿರುವ ಸುಪ್ರೀಂಕೋರ್ಟ್ನ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ತಮ್ಮ 68ನೇ ಇಳಿವಯಸ್ಸಿನಲ್ಲಿ ಮೂರನೇ ಮದುವೆ ಆಗಿದ್ದಾರೆ.
ಬ್ರಿಟನ್ ರಾಜಧಾನಿ ಲಂಡನ್ನಲ್ಲಿ ಬ್ರಿಟನ್ ಪ್ರಜೆಯಾಗಿರುವ ಟ್ರಿನಾ...
ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ.
ಚುನಾವಣಾ ಅಕ್ರಮಗಳ ಹಿನ್ನೆಲೆಯಲ್ಲಿ ಪ್ರಜ್ವಲ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಈ ತೀರ್ಪಿನೊಂದಿಗೆ ಪ್ರಜ್ವಲ್ ರೇವಣ್ಣ...
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ನಸುಕಿನ ಜಾವ ದಿಢೀರ್ ಅನಾರೋಗ್ಯ ಕಾಣಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಸುಕಿನ ಜಾವ 3.40ರ ಸುಮಾರಿಗೆ ಕುಮಾರಸ್ವಾಮಿ ಅವರಿಗೆ ಸುಸ್ತು ಕಾಣಿಸಿಕೊಂಡಿತ್ತು.
ಜಯನಗರದಲ್ಲಿರುವ ಅಪೋಲೋ...