BREAKING: ಮತ್ತೋರ್ವ ಯಡಿಯೂರಪ್ಪ ಆಪ್ತ ಬಿಜೆಪಿ ಬಿಟ್ಟು ಕಾಂಗ್ರೆಸ್​ಗೆ

ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ ಆಪ್ತ, ಯಡಿಯೂರಪ್ಪ ಅವರ ಕಾನೂನು ಸಲಹೆಗಾರರಾಗಿದ್ದ ಮೋಹನ್​ ಲಿಂಬಿಕಾಯಿ ಅವರು ಬಿಜೆಪಿ ಬಿಡುತ್ತಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್​ ಮತ್ತು ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಇವತ್ತು ಸಂಜೆ ಕಾಂಗ್ರೆಸ್​ಗೆ ಸೇರ್ಪಡೆ ಆಗಲಿದ್ದಾರೆ.

ಜೆಡಿಎಸ್​ ಬಿಟ್ಟು ಬಿಜೆಪಿ ಸೇರಿದ್ದರ ಹಿನ್ನೆಲೆಯಲ್ಲಿ ವಿಧಾನಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಬಿಜೆಪಿ ಪಶ್ವಿಮ ಶಿಕ್ಷಕರ ಕ್ಷೇತ್ರದಿಂದ ಟಿಕೆಟ್​ ನೀಡಿತ್ತು. ಟಿಕೆಟ್​ ಆಕಾಂಕ್ಷಿಯಾಗಿದ್ದ ಲಿಂಬಿಕಾಯಿ ಅವರು ಇದರಿಂದ ಕೆರಳಿದ್ದರು.

ಈ ಬಾರಿ ಕಾಂಗ್ರೆಸ್​ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಲಿಂಬಿಕಾಯಿ ಅವರಿಗೆ ಟಿಕೆಟ್​ ನೀಡುವುದು ಖಚಿತವಾಗಿದೆ.

ಈ ಕ್ಷೇತ್ರವನ್ನು ಸದ್ಯ ಬಿಜೆಪಿ ಶಾಸಕ ಅರವಿಂದ್​ ಬೆಲ್ಲದ್​ ಅವರು ಪ್ರತಿನಿಧಿಸುತ್ತಿದ್ದಾರೆ.  ಯಡಿಯೂರಪ್ಪ  ಅವರು ಕೆಜೆಪಿ ಕಟ್ಟಿದಾಗ ಮೊದಲು ಬಿಜೆಪಿಗೆ ರಾಜೀನಾಮೆ ಕೊಟ್ಟಿದ್ದೇ ಲಿಂಬಿಕಾಯಿ ಅವರು.

ಆ ಬಳಿಕ ಕೆಜೆಪಿಯಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಕೆಜೆಪಿ ಸೇರುವ ಸಲುವಾಗಿ ವಿಧಾನಪರಿಷತ್​ ಸದಸ್ಯ ಸ್ಥಾನಕ್ಕೂ ಆಗ ರಾಜೀನಾಮೆ ನೀಡಿದ್ದರು.

LEAVE A REPLY

Please enter your comment!
Please enter your name here