ಕೋವಿಡ್ ಲಸಿಕೆ ತೆಗೆದುಕೊಂಡರೆ ಮಕ್ಕಳಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಕೋವಿಡ್ ಲಸಿಕೆ ತೆಗೆದುಕೊಂಡರೆ ಮಕ್ಕಳಾಗುವುದಿಲ್ಲ ಎಂದು ತಮ್ಮದೇ ಪಕ್ಷದ ವಿಧಾನಪರಿಷತ್ ಸದಸ್ಯ ಮಂಜುನಾಥ್ ಅವರು ವ್ಯಕ್ತಪಡಿಸಿದ್ದ ಅಭಿಪ್ರಾಯವನ್ನು ನಳೀನ್ ಕುಮಾರ್ ಕಟೀಲ್ ಅವರು ಬಹಿರಂಗ ಸಮಾವೇಶದಲ್ಲಿ ಸಮರ್ಥಿಸಿಕೊಂಡಿದ್ದಾರೆ.
ಕೋವಿಡ್ ಲಸಿಕೆ ತೆಗೆದುಕೊಂಡರೆ ಮಕ್ಕಳಾಗುವುದಿಲ್ಲ ಎಂದು ಬಿಜೆಪಿ ಎಂಎಲ್ಸಿ ಅವರು ನೀಡಿದ್ದ ಹೇಳಿಕೆಯ ಸಮರ್ಥನೆಗೆ ಕಟೀಲ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಉದಾಹರಣೆಯನ್ನು ನೀಡಿದ್ದಾರೆ.
ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಬಿಜೆಪಿ ಸಂಕಲ್ಪಯಾತ್ರೆಯಲ್ಲಿ ಮಾತಾಡಿದ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್,
`ರಾಹುಲ್ ಗಾಂಧಿ, ಸಿದ್ರಾಮಣ್ಣ ಹೇಳಿದ್ರು ಲಸಿಕೆ ತಗೋಬೇಡಿ ಮಕ್ಕಳಾಗುವುದಿಲ್ಲ, ಲಸಿಕೆ ತಗೋಬೇಡಿ ಮಕ್ಕಳಾಗುವುದಿಲ್ಲ, ಲಸಿಕೆ ತಗೋಬೇಡಿ ಮಕ್ಕಳಾಗುವುದಿಲ್ಲ. ಆದರೆ ರಾತ್ರಿ ಕದ್ದು ಹೋಗಿ ರಾಹುಲ್ ಗಾಂಧಿ, ಸಿದ್ರಾಮಣ್ಣ ಲಸಿಕೆ ತಗೊಂಡ್ರು. ನಮ್ಮ ಎಂಎಲ್ಸಿ ಮಂಜುನಾಥ್ ಹೇಳಿದ್ರು, ಅದಕ್ಕೆ ರಾಹುಲ್ ಗಾಂಧಿಗೆ ಮದುವೆ ಆಗುವುದಿಲ್ಲ, ಮಕ್ಕಳಾಗುವುದಿಲ್ಲ ಅಂತ ಹೇಳಿ’