ಸಂಚಾರ ದಟ್ಟಣೆಯಿಂದ ಕಂಗೆಟ್ಟಿರುವ ರಾಜಧಾನಿ ಬೆಂಗಳೂರಿಗರಿಗೆ ಸಮಾಧಾನಕಾರಿ ಸುದ್ದಿ. ನಾಳೆಯಿಂದ ಬಹು ನಿರೀಕ್ಷಿತ ಬೈಯಪ್ಪನಹಳ್ಳಿ ಮತ್ತು ಕೆ ಆರ್ ಪುರ ನಡುವಿನ ಹಾಗೂ ಕೆಂಗೇರಿ ಮತ್ತು ಚಲಘಟ್ಟ ನಡುವೆ ಮೆಟ್ರೋ ರೈಲು ಓಡಾಟ ಆರಂಭ ಆಗಲಿದೆ. (#NammaMetro#PurpleLineOperarions)
ನಾಳೆ ಅಂದರೆ ಅಕ್ಟೋಬರ್ 9ರಂದು ಬೆಳಗ್ಗೆ 5 ಗಂಟೆಯಿಂದ ಈ ಎರಡೂ ಮಾರ್ಗದಲ್ಲಿ (ನೇರಳೆ ಮಾರ್ಗದಲ್ಲಿ) ಮೆಟ್ರೋ ಸಂಚಾರ ಆರಂಭವಾಗಲಿದೆ. ವೈಟ್ಫೀಲ್ಡ್ನಿಂದ ಪ್ರತಿ ದಿನ ಕೊನೆಯ ಮೆಟ್ರೋ ರೈಲು ರಾತ್ರಿ 10.45ಕ್ಕೆ ನಿರ್ಗಮಿಸಲಿದೆ.
ಬೈಯಪ್ಪನಹಳ್ಳಿ ಮತ್ತು ಕೆ ಆರ್ ಪುರ ನಡುವೆ 2.1 ಕಿಲೋ ಮಾರ್ಗ ಮತ್ತು ಕೆಂಗೇರಿ ಮತ್ತು ಚಲಘಟ್ಟ ನಡುವೆ 2.05 ಕಿಲೋ ಮೀಟರ್ ಮೆಟ್ರೋ ರೈಲು ಮಾರ್ಗ ನಾಳೆಯಿಂದ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ.
ಈ ಮಾರ್ಗಗಳಲ್ಲೂ ಮೆಟ್ರೋ ಓಡಾಟ ಶುರುವಾಗುವುದರೊಂದಿಗೆ ನೇರಳೆ ಮಾರ್ಗ ಉದ್ದ 43.49 ಕಿಲೋ ಮೀಟರ್ಗೆ ಹೆಚ್ಚಳವಾಗಿದೆ. ವೈಟ್ಫೀಲ್ಡ್ (ಕಾಡುಗೋಡಿ)ಯಿಂದ ಚಲಘಟ್ಟ ಸಂಪರ್ಕಿಸುವ ಈ ಮಾರ್ಗದಲ್ಲಿ 37 ಮೆಟ್ರೋ ನಿಲ್ದಾಣಗಳಿವೆ.
ಇದರೊಂದಿಗೆ ನಮ್ಮ ಮೆಟ್ರೋ ಸಂಪರ್ಕ ರಾಜಧಾನಿಯಲ್ಲಿ ಒಟ್ಟು 73.81 ಕಿಲೋ ಮೀಟರ್ಗೆ ಏರಿಕೆ ಆಗಿದೆ.
ವೈಟ್ಫೀಲ್ಡ್ನಿಂದ ಪಟ್ಟಂದೂರು ಅಗ್ರಹಾರ ನಿಲ್ದಾಣಕ್ಕೆ 3 ನಿಮಿಷ, ಪಟ್ಟಂದೂರು ಅಗ್ರಹಾರದಿಂದ ಮೈಸೂರು ರಸ್ತೆ ನಿಲ್ದಾಣಕ್ಕೆ 3 ನಿಮಿಷ, ಮೆಜೆಸ್ಟಿಕ್ನಿಂದ ಎಂಜಿ ರೋಡ್ ನಿಲ್ದಾಣಕ್ಕೆ 3 ನಿಮಿಷ ಮತ್ತು ಮೈಸೂರು ರಸ್ತೆಯಿಂದ ಚಲಘಟ್ಟಕ್ಕೆ 10 ನಿಮಿಷ ಬೇಕಾಗುತ್ತದೆ,
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಹಣ ಮತ್ತು ಗೌರವ ಗಳಿಸಲು ಬಯಸುತ್ತಾರೆ. ಆದ್ರೆ ಇದು ಕೆಲವರಿಗೆ ಕನಸು ನಾನಸಾಗುತ್ತದೆ. ಇನ್ನು ಕೆಲವರಿಗೆ ಕನಸು ಹಾಗೆ ಉಳಿದುಬಿಡುತ್ತದೆ. ...
ವೀರಯೋಧ ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ಇಂದು ಸಿದ್ದರಾಮಯ್ಯ ಸರ್ಕಾರ 50 ಲಕ್ಷ ರೂಪಾಯಿಗಳ ಚೆಕ್ ವಿತರಿಸಿದೆ. ನ.22 ಜಮ್ಮು-ಕಾಶ್ಮೀರದ ರಜೌರಿಯಲ್ಲಿ ನಡೆದ ಭಯೋತ್ಪಾದರ ವಿರುದ್ಧದ ಕಾರ್ಯಾಚರಣೆ...
ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮುಚ್ಚಳಿಕೆ ಬರೆಸಿ ಪ್ರಕರಣ ದಾಖಲಿಸಿದ್ದ ಅರಣ್ಯಾಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ತನಿಖೆಗೆ ಆದೇಶಿಸಲಾಗಿದೆ. ಸ್ಪೀಕರ್ ಯು ಟಿ ಖಾದರ್ ಅವರು...
ಚಳಿಗಾಲದಲ್ಲಿ ಹೆಚ್ಚಾಗಿ ನಮ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಈ ಸಮಯದಲ್ಲಿ ಚರ್ಮವು ಡ್ರೈ ಆಗುವುದರ ಜೊತೆಗೆ ಮುಖದ ಮೇಲೆ ಸೋಂಕುಗಳು ಹೆಚ್ಚು ಕಂಡುಬರುತ್ತದೆ. ಆದಾಗ್ಯೂ, ಮನೆಯಲ್ಲಿ ಸುಲಭ...