ಜುಲೈ 10ರಿಂದ ಆಗಸ್ಟ್ 9ರವರೆಗೆ ಬೈಯಪ್ಪನಹಳ್ಳಿ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ಸ್ಟೇಷನ್ (ಎಸ್ ವಿ ರೋಡ್) ಕೃಷ್ಣರಾಜಪುರಂ ಮತ್ತು ವೈಟ್ಫೀಲ್ಡ್ ಮೆಟ್ರೋ ಸ್ಟೇಷನ್ಗಳ ನಡುವೆ (Purple Lane) ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 7 ಗಂಟೆವರೆಗೆ ಮೆಟ್ರೋ ರೈಲುಗಳ ಓಡಾಟ ಇರಲ್ಲ ಎಂದು ನಮ್ಮ ಮೆಟ್ರೋ ಪ್ರಕಟಣೆಯಲ್ಲಿ ತಿಳಿಸಿದೆ.
ಸಿಗ್ನಲ್ ಸೇರಿದಂತೆ ಇತರೆ ದುರಸ್ತಿ ಕಾರ್ಯಗಳ ಹಿನ್ನೆಲೆಯಲ್ಲಿ ಮೆಟ್ರೋ ರೈಲುಗಳ ಓಡಾಟದಲ್ಲಿ ವ್ಯತ್ಯಯವಾಗಲಿದೆ ಎಂದು ನಮ್ಮ ಮೆಟ್ರೋ ಹೇಳಿದೆ.
ಆದ್ರೆ ಈ ಮಾರ್ಗದಲ್ಲಿ ಬೆಳಗ್ಗೆ 7 ಗಂಟೆಯಿಂದ ಮೆಟ್ರೋ ರೈಲು ಓಡಾಟ ಮತ್ತೆ ಆರಂಭವಾಗಿ ರಾತ್ರಿ 11 ಗಂಟೆಯವರೆಗೆ ಸಂಚರಿಸಲಿದೆ ಎಂದು ನಮ್ಮ ಮೆಟ್ರೋ ಹೇಳಿದೆ.
ಆದರೆ ಸ್ವಾಮಿ ವಿವೇಕಾನಂದ ಮೆಟ್ರೋ ಸ್ಟೇಷನ್ ಮತ್ತು ಕೆಂಗೇರಿ ನಡುವೆ ಎಂದಿನಂತೆ ಬೆಳಗ್ಗೆ 5 ಗಂಟೆಯಿಂದ 7 ಗಂಟೆಯವರೆಗೆ ಮೆಟ್ರೋ ರೈಲು ಓಡಾಡಲಿದೆ.
ಆದರೆ ಹಸಿರು ಬಣ್ಣದ ಮಾರ್ಗದಲ್ಲಿ ಮೆಟ್ರೋ ರೈಲು ಓಡಾಟದಲ್ಲಿ ಯಾವುದೇ ವ್ಯತ್ಯಯ ಇರಲ್ಲ ಎಂದು ನಮ್ಮ ಮೆಟ್ರೋ ಹೇಳಿದೆ.
ADVERTISEMENT
ADVERTISEMENT