ಶಾಸಕ ಸಾ.ರಾ.ಮಹೇಶ್ ಅವರ ಆರೋಪಕ್ಕೆ ಸಂಬಂಧಿಸಿದಂತೆ ಆಗಿನ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಯವರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ರೋಹಿಣಿ ಸಿಂಧೂರಿಯವರ ವಿರುದ್ಧ ಶಾಸಕ ಸಾರಾ ಮಹೇಶ್ ವಿಧಾನಸಭಾ ಅಧಿವೇಶನದಲ್ಲಿ ತನಿಖೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಆ ಹಿನ್ನೆಲೆಯಲ್ಲಿ, ವಸತಿ ಇಲಾಖೆಯ ಕಾರ್ಯದರ್ಶಿ ಡಾ.ಜೆ.ರವಿಶಂಕರ್ ಅವರು ಸಿಂಧೂರಿಯವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ರಿಸರ ಸ್ನೇಹಿ ಬಟ್ಟೆ ಬ್ಯಾಗ್ ವಿತರಣೆಯಲ್ಲಿ ಲೋಪ ಆರೋಪ, ಜಿಲ್ಲಾಧಿಕಾರಿಯ ಅಧಿಕೃತ ನಿವಾಸದಲ್ಲಿ ಅನುಮತಿ ಇಲ್ಲದೆ ನವೀಕರಣ, ಕೊರೋನಾದಿಂದ ಮೃತಪಟ್ಟವರ ಸಂಖ್ಯೆ ನೀಡುವಾಗ ತಪ್ಪು ಮಾಹಿತಿ ಸೇರಿದಂತೆ ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಕರ್ತವ್ಯ ಲೋಪ ಆರೋಪಕ್ಕೆ ಸಂಬಂಧಿಸಿದಂತೆ 4 ವಿಚಾರಗಳಿಗೆ ವಿವರಣೆ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿದೆ.
ಸಾರಾ ಮಹೇಶ್ ನೀಡಿದ್ದ ಪ್ರಕರಣದ ತನಿಖೆಯ ಭಾಗವಾಗಿ ರೋಹಿಣಿ ಸಿಂಧೂರಿ ಯವರಿಗೆ ವಿವರಣೆ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.
ಬೆಂಗಳೂರಿನ ವಿಕಾಸಸೌಧದ ವಸತಿ ಇಲಾಖೆಯ ಕಚೇರಿಯಲ್ಲಿ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಆಗಮಿಸಿ ವಿವರಣೆ ನೀಡುವಂತೆ ನೋಟಿಸ್ನಲ್ಲಿ ಹೇಳಲಾಗಿದೆ.