ADVERTISEMENT
ವಿಧಾನಸಭಾ ಚುನಾವಣೆಯ ಬಳಿಕ ಮೊದಲ ಕಂತಿನ ಆಷರೇಷನ್ ರಾಜಕೀಯ ಇವತ್ತು ನಡೆಯಲಿದೆ.
ವಿಧಾನಸಭಾ ಚುನಾವಣೆಯ ವೇಳೆ ಬಿಜೆಪಿಯನ್ನು ತೊರೆದು ಜೆಡಿಎಸ್ಗೆ ಸೇರ್ಪಡೆಯಾಗಿದ್ದ ಮಾಜಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ.
ಭಾನುವಾರವಷ್ಟೇ ಆಯನೂರು ಅವರು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು.
ವಿಧಾನಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ಗೆ ಸೇರ್ಪಡೆಯಾಗಿದ್ದರು. ಜೆಡಿಎಸ್ನಿಂದ ಸ್ಪರ್ಧಿಸಿ ಕೇವಲ 8,863 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಕುಸಿದಿದ್ದರು.
ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಸಿಗದೇ ಬಂಡಾಯವಾಗಿ ಸ್ಪರ್ಧಿಸಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರಗೆ ಪ್ರಬಲ ಸ್ಪರ್ಧೆ ನೀಡಿದ್ದ ಎಸ್ ಪಿ ನಾಗರಾಜ್ ಗೌಡ ಅವರು ಇವತ್ತು ಕಾಂಗ್ರೆಸ್ಗೆ ಮರಳಲಿದ್ದಾರೆ.
ಶಿಕಾರಿಪುರದಲ್ಲಿ ಬಂಡಾಯವಾಗಿ ಸ್ಪರ್ಧಿಸಿ 70,802 ಮತಗಳನ್ನು ಪಡೆದಿದ್ದ ನಾಗರಾಜ್ಗೌಡ ಅವರು 11,008 ಮತಗಳಿಂದ ಸೋತಿದ್ದರು. ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಕುಸಿದಿತ್ತು. ಯಡಿಯೂರಪ್ಪ ಅವರ ಜೊತೆಗೆ ಕಾಂಗ್ರೆಸ್ ನಾಯಕರ ಒಳಒಪ್ಪಂದಿಂದಲೇ ನಾಗರಾಜ್ ಗೌಡಗೆ ಸೋಲಾಯಿತು ಎಂಬ ಟೀಕೆಗಳ ನಡುವೆ ಇವತ್ತು ನಾಗರಾಜ್ ಗೌಡ ಮತ್ತೆ ಕಾಂಗ್ರೆಸ್ಗೆ ಸೇರುತ್ತಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಅವರ ಬೆಂಬಲಿಗರು ಇವತ್ತು ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ. ಬಿಜೆಪಿ ಶಾಸಕ ಎಸ್ಟಿಎಸ್ ಸೇರ್ಪಡೆಗೂ ಮೊದಲು ಬೆಂಬಲಿಗರು ಸೇರ್ಪಡೆ ಆಗುವ ಮೂಲಕ ಬಿಜೆಪಿಗೆ ಹೊಸ ತಲೆನೋವು ಶುರುವಾಗಿದೆ. ನಿನ್ನೆಯಷ್ಟೇ ಎಸ್ಟಿ ಸೋಮಶೇಖರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕ್ಷೇತ್ರಕ್ಕೆ ಅನುದಾನ ಸಂಬಂಧ ಮಾತುಕತೆ ನಡೆಸಿದ್ದರು.
ADVERTISEMENT