ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಮತ್ತು ಜೆಡಿಎಸ್ ಹಂಗಾಮಿ ಅಧ್ಯಕ್ಷರೂ ಆಗಿರುವ ಹೆಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಮಾನಹಾನಿಕರ ಅಸಭ್ಯ ಮತ್ತು ವ್ಯಂಗ್ಯ ಭರಿತ ಪೋಸ್ಟರ್ ಅಂಟಿಸಿದ್ದರ ಸಂಬಂಧ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮನೋಹರ್ ಎಸ್ (ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ), ಕಾರ್ತಿಕ್ ಡಿ ಎಸ್, ದರ್ಶನ್ಗೌಡ ಹೆಚ್ ಡಿ, ಅರ್ಜುನ್ ಡಿ ಗೌಡ, ಸಂತೋಷ್ ಮತ್ತು ಇತರರು ಮೊದಲ ಐವರು ಆರೋಪಿಗಳಾಗಿದ್ದಾರೆ.
ಭಾರತೀಯ ದಂಡ ಸಂಹಿತೆಯ ಕಲಂ 153ಎ ಅಡಿಯಲ್ಲಿ (ಸೌಹಾರ್ದತೆಗೆ ಧಕ್ಕೆ ತಂದ ಆರೋಪ) ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವೆಂಬರ್ 20ರಂದು ಬೆಳಗ್ಗೆ ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಮುಖ್ಯ ಕಚೇರಿ ಜೆ ಪಿ ಭವನಕ್ಕೆ ಸಂಪರ್ಕಿಸುವ ಸಾರ್ವಜನಿಕ ರಸ್ತೆಯಲ್ಲಿರುವ ಕಾಪೌಂಡ್ ಗೋಡೆಗಳಲ್ಲಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಭಿತ್ತಿಪತ್ರಗಳನ್ನು ಅಂಟಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ ಹಾಗೂ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ದಯಾನಂದ ಅವರಿಗೆ ದೂರು ನೀಡಿದ್ದರು.
ADVERTISEMENT
ADVERTISEMENT