PSI Scam: ನ್ಯಾಯಾಂಗ ತನಿಖೆಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಆದೇಶ-ACB ರದ್ದುಗೊಳಿಸಿದ್ದ ನ್ಯಾಯಮೂರ್ತಿಗಳಿಗೆ ಹೊಣೆ

ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಪಿಎಸ್​ಐ ನೇಮಕಾತಿ ಹಗರಣದ ತನಿಖೆಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ನ್ಯಾಯಾಂಗ ಆಯೋಗವನ್ನು ರಚಿಸಿದೆ.

ಕರ್ನಾಟಕ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖಾ ಆಯೋಗ ರಚಿಸಿ ಸರ್ಕಾರ ಆದೇಶಿಸಿದೆ.

ಮೇ 31ರಂದು ವೀರಪ್ಪ ಅವರು ನಿವೃತ್ತರಾಗಿದ್ದರು. ಕರ್ನಾಟಕದಲ್ಲಿ ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ರಚನೆಯಾಗಿದ್ದ ಎಸಿಬಿಯನ್ನು ರದ್ದುಗೊಳಿಸಿ ಲೋಕಾಯುಕ್ತಕ್ಕೆ ಮತ್ತೆ ಶಕ್ತಿ ತುಂಬಿದ ಐತಿಹಾಸಿಕ ತೀರ್ಪು ನೀಡಿದ್ದರು.

ಮೂರು ತಿಂಗಳೊಳಗೆ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆಯೋಗಕ್ಕೆ ಸೂಚಿಸಲಾಗಿದೆ.

2021ರ ಅಕ್ಟೋಬರ್​ 3ರಂದು 545 ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ಹಗರಣದಲ್ಲಿ ವ್ಯಾಪಕ ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ಈ ಹಿಂದೆ ಬಿಜೆಪಿ ಸರ್ಕಾರ ಆದೇಶಿಸಿತ್ತು. 

ಈ ಹಗರಣದಲ್ಲಿ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್​ ಪೌಲ್​ ಅವರನ್ನು ಎಸ್​ಐಟಿ ಬಂಧಿಸಿತ್ತು.

ನ್ಯಾಯಾಂಗ ಆಯೋಗಕ್ಕೆ ಅಗತ್ಯ ಸಹಕಾರ ನೀಡುವಂತೆ ಸಿಐಡಿ ಮತ್ತು ಪೊಲೀಸ್​ ಅಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.

LEAVE A REPLY

Please enter your comment!
Please enter your name here