ಪುಟ್ಟರಂಗಶೆಟ್ಟಿ ಅವರಿಗೆ ತಪ್ಪಿದ ಸಚಿವ ಸ್ಥಾನ, ವಿಧಾನಸಭೆ ಉಪ ಸಭಾಧ್ಯಕ್ಷ ಹುದ್ದೆ

ಚಾಮರಾಜನಗರ ಕ್ಷೇತ್ರದ ಶಾಸಕ ಸಿ ಪುಟ್ಟರಂಗ ಶೆಟ್ಟಿ ಅವರಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸ್ಥಾನ ತಪ್ಪಿದೆ.

ಪುಟ್ಟರಂಗಶೆಟ್ಟಿ ಅವರು ವಿಧಾನಸಭೆಯಲ್ಲಿ ಡೆಪ್ಯೂಟಿ ಸ್ಪೀಕರ್​/ಉಪ ಸಭಾಧ್ಯಕ್ಷರಾಗಲಿದ್ದಾರೆ.

ಈ ಬಾರಿ ಮಾಜಿ ಸಚಿವ ವಿ ಸೋಮಣ್ಣ ಅವರನ್ನು ಪುಟ್ಟರಂಗಶೆಟ್ಟಿ ಅವರು ಸೋಲಿಸಿದ್ದರು.

ಉಪ್ಪಾರ ಸಮುದಾಯದಿಂದ ಪ್ರತಿನಿಧಿಸುವ ಏಕೈಕ ಶಾಸಕರಾಗಿರುವ ಪುಟ್ಟರಂಗಶೆಟ್ಟಿ ಅವರು ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದರು.