ಪುತ್ತೂರಲ್ಲಿ ಬಿಜೆಪಿ ಕಾರ್ಯಕರ್ತರನ್ನು ಠಾಣೆಗೆ ಕರೆಸಿ ಅಮಾನುಷವಾಗಿ ಥಳಿಸಿದ್ದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಲಾಗಿದೆ.
ಪುತ್ತೂರು ಗ್ರಾಮೀಣ ಠಾಣೆ ಸಬ್ ಇನ್ಸ್ಪೆಕ್ಟರ್ ಶ್ರೀನಾಥ್ ರೆಡ್ಡಿ ಮತ್ತು ಕಾನ್ಸ್ ಸ್ಟೇಬಲ್ ಹರ್ಷಿತ್ ಮತ್ತು ಪುತ್ತೂರು ಡಿವೈಎಸ್ಪಿ ಅವರನ್ನು ಅಮಾನತು ಮಾಡಲಾಗಿದೆ.
ಥಳಿತಕ್ಕೊಳಗಾದ ಅವಿನಾಶ್ ಅವರ ತಂದೆ ಪುತ್ತೂರು ಡಿವೈಎಸ್ಪಿ ವಿರುದ್ಧದ ಕೊಟ್ಟ ದೂರನ್ನು ಆಧರಿಸಿ ಮೂವರು ಪೊಲೀಸ್ ಅಧಿಕಾರಿಗಳ ಮೇಲೂ ಎಫ್ಐಆರ್ ದಾಖಲಾಗಿದ್ದು, ಮೂವರನ್ನೂ ಅಮಾನತು ಮಾಡಲಾಗಿದೆ.
ಈ ಮೂವರ ವಿರುದ್ಧದ ಇಲಾಖಾ ತನಿಖೆ ಜವಾಬ್ದಾರಿಯನ್ನು ಬಂಟ್ವಾಳ ಡಿವೈಎಸ್ಪಿ ನೀಡಿ ಪೊಲೀಸ್ ಇಲಾಖೆ ಆದೇಶಿಸಿದೆ.
ಪುತ್ತೂರಲ್ಲಿ ಬಿಜೆಪಿ ಸೋಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಸಂಸದ ಡಿ ವಿ ಸಂದಾನಂದ ಗೌಡ ಎಂದು ಆರೋಪಿಸಿ ಅವರ ಭಾವಚಿತ್ರ ಇರುವ ಪೋಸ್ಟರ್ಗೆ ಚಪ್ಪಲಿ ಹಾರ ಹಾಕಿ ಪ್ರತಿಭಟಿಸಲಾಗಿತ್ತು.
ಆ ಬಳಿಕ ಪೊಲೀಸರು ಈ ಪೋಸ್ಟರ್ ಹಾಕಿದ್ದಾರೆ ಎಂಬ ಆರೋಪದಡಿ ಐವರು ಯುವಕರನ್ನು ಠಾಣೆಗೆ ಕರೆಸಿ ಥಳಿಸಿದ್ದರು.
ADVERTISEMENT
ADVERTISEMENT