ಇಂದು ತುಮಕೂರು ಸಿದ್ದಂಗಂಗಾ ಮಠಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಸಂಜೆ ದಿವಂಗತ ನಟ ಪುನೀತ್ ರಾಜ್ ಕುಮಾರ್ ಮನೆಗೆ ಭೇಟಿ ನೀಡಿದ್ದರು. ಅಪ್ಪು ಫೋಟೋಗೆ ಹೂ ನಮನ ಸಲ್ಲಿಸಿದರು. ಅಪ್ಪು ಪತ್ನಿ ಅಶ್ವಿನಿ ಮತ್ತು ಪುತ್ರಿಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್, ಮಾಜಿ ಮಂತ್ರಿ ಕೆ ಹೆಚ್ ಮುನಿಯಪ್ಪ, ನಟ ರಾಘವೇಂದ್ರ ರಾಜಕುಮಾರ್, ನಿರ್ಮಾಪಕ ಚಿನ್ನೇಗೌಡ ಉಪಸ್ಥಿತರಿದ್ದರು.