ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಉಚ್ಛ ನ್ಯಾಯಾಲಯದ ಆದೇಶದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸರ್ವೋಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
ಈ ಮೇಲ್ಮನವಿಯಲ್ಲಿ ರಾಹುಲ್ ಅವರು ಎರಡು ಮನವಿಗಳನ್ನು ಮಾಡಿದ್ದಾರೆ.
ದೋಷಿ ಎಂದು ಘೋಷಿಸಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದು ಮೇಲ್ಮನವಿಯನ್ನು ವಜಾಗೊಳಿಸಿದ್ದ ಗುಜರಾತ್ ಉಚ್ಛ ನ್ಯಾಯಾಲಯದ ಆದೇಶವನ್ನು ತಡೆ ಹಿಡಿಯಬೇಕು.
ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ವಿಚಾರಣೆ ಮುಗಿಯುವರೆಗೆ ಗುಜರಾತ್ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಮತ್ತು ದೋಷಿ ಎಂದು ನೀಡಲಾಗಿರುವ ಆದೇಶಕ್ಕೆ ತಡೆ ನೀಡಬೇಕು.
ಉಪ ಚುನಾವಣೆ ಘೋಷಿಸಬಹುದು:
ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡು 112 ದಿನಗಳಾಗಿವೆ ಮತ್ತು ಯಾವುದೇ ಕ್ಷಣದಲ್ಲಾದರೂ ಚುನಾವಣಾ ಆಯೋಗ ವಯನಾಡು ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಿಸಬಹುದು. ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20ರಿಂದ ಆರಂಭವಾಗಲಿದೆ ಮತ್ತು ಮಧ್ಯಂತರ ಪರಿಹಾರ ಸಿಗದೇ ಹೋದರೆ ಆ ಕಲಾಪಗಳಲ್ಲಿ ಭಾಗವಹಿಸುವ ಮತ್ತು ನನ್ನ ಪಕ್ಷ ಮತ್ತು ಕ್ಷೇತ್ರವನ್ನು ಪ್ರತಿನಿಧಿಸುವ ಅವಕಾಶದಿಂದ ವಂಚಿತನಾಗುತ್ತೇನೆ