ರೈಲು ದುರಂತ ಹಿನ್ನೆಲೆಯಲ್ಲಿ ಒಡಿಶಾದಲ್ಲಿ ಸಿಲುಕಿರುವ ರಾಜ್ಯದ ಜಾನಪದ ಕಲಾವಿದರ ತಂಡವನ್ನು ವಿಮಾನ ಮೂಲಕ ಬೆಂಗಳೂರಿಗೆ ವಾಪಸ್ ಕರೆದುಕೊಂಡು ಬರುವ ವ್ಯವಸ್ಥೆ ಮಾಡಲಾಗಿದೆ.
ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ತೆರಳಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಒಡಿಶಾದ ಪುರಿಯಲ್ಲಿ ನಡೆದ ಜಾನಪದ ಜಾತ್ರೆಯಲ್ಲಿ ಭಾಗವಹಿಸಲು ತೆರಳಿದ್ದ ರಾಜ್ಯದ 17 ಜನರ ಕಲಾವಿದರ ತಂಡ ರೈಲು ದುರಂತದ ಹಿನ್ನೆಲೆಯಲ್ಲಿ ಹಿಂದಿರುಗಿ ಬರಲಾರದೇ ಅತಂತ್ರ ಸ್ಥಿತಿಯಲ್ಲಿದ್ದರು. ಈ ಕಲಾತಂಡವನ್ನು ಕ್ಷೇಮವಾಗಿ ಕರೆತರಲು ವಿಮಾನ ಪ್ರಯಾಣ ವ್ಯವಸ್ಥೆ ಮಾಡಲಾಗಿದೆ.
ಎಂದು ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಕ್ರೀಡಾಕೂಟಕ್ಕಾಗಿ ಕರ್ನಾಟಕದ 32 ಮಂದಿಯನ್ನೂ ವಿಮಾನ ಮೂಲಕ ಬೆಂಗಳೂರಿಗೆ ಕರೆ ತರುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಕೋಲ್ಕತಾಗೆ ತೆರಳಿದ್ದ ರಾಜ್ಯದ ಕ್ರೀಡಾಪಟುಗಳು & ಅವರ ತರಬೇತುದಾರರು ಸೇರಿದಂತೆ ಒಟ್ಟು 32 ಜನರಿಗೆ ವಿಮಾನ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ.