Monday, May 12, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ಸಿಎಂ ಬೊಮ್ಮಾಯಿಗೆ 14 ಸರಣಿ ಪ್ರಶ್ನೆ ಹಾಕಿದ ಸಿದ್ದರಾಮಯ್ಯ

by
12th August 2022
in News
0
Siddaramaiah
0
SHARES
0
VIEWS
Share on FacebookShare on Twitter

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ನವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ  14 ಪ್ರಶ್ನೆಗಳನ್ನು ಕೇಳಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮನೆ ಮನೆಗೂ ತ್ರಿವರ್ಣ ಧ್ವಜ ಎಂಬ ಅಭಿಯಾನ ನಡೆಸಿದೆ.

ಅಭಿಯಾನದ ಅಂಗವಾಗಿ ಸಿಎಂ ಬಸವರಾಜ ಬೊಮ್ಮಾಯಿಯವರು ಏಕೆ ತ್ರಿವರ್ಣ ಧ್ವಜ ಎಂಬ ಅಂಕಣ ಬರೆದು ಜಾಹೀರಾತು ನೀಡಿದ್ದಾರೆ. ಇದನ್ನು ಹಂಚಿಕೊಂಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah)ನವರು ಸಿಎಂ ಬೊಮ್ಮಾಯಿಯವರಿಗೆ 14 ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಸರಣಿ ಪ್ರಶ್ನೆಗಳನ್ನು ಕೇಳಿ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಏಕೆ ತ್ರಿವರ್ಣಧ್ವಜ? ಎಂಬ ನಿಮ್ಮ ವಿವರಣೆ ಓದಿ ಸಂತೋಷವಾಯಿತು. ರಾಷ್ಟ್ರಧ್ವಜವನ್ನು ಒಪ್ಪಿಕೊಂಡಿದ್ದಕ್ಕಾಗಿ ರಾಜ್ಯದ ಜನರ ಪರವಾಗಿ ನಿಮಗೆ ಧನ್ಯವಾದಗಳು. ಇದರ ಜೊತೆಗೆ ಜನರ ಪರವಾಗಿ ನಾನು ಕೇಳುವ ಹದಿಮೂರು ಪ್ರಶ್ನೆಗಳಿಗೆ ತಾಳ್ಮೆಯಿಂದ ಉತ್ತರಿಸುವಿರೆಂದು ನಂಬಿದ್ದೇನೆ.

ಸ್ವತಂತ್ರ ಭಾರತದಲ್ಲಿ 52 ವರ್ಷಗಳ ವರೆಗೆ ದೇಶ ಹೆಮ್ಮೆ ಪಡುವ ರಾಷ್ಟ್ರಧ್ವಜವನ್ನು ಆರ್.ಎಸ್.ಎಸ್ ಕಚೇರಿ ಮೇಲೆ ಹಾರಿಸದೆ ಇರಲು ಕಾರಣವೇನು? 2001ರಲ್ಲಿ ದೇಶಭಕ್ತ ಯುವಕರು ರಾಷ್ಟ್ರಧ‍್ವಜ ಹಾರಿಸಲು ಬಂದಾಗ ಅವರನ್ನು ಹಿಡಿದು ಪೊಲೀಸರಿಗೆ ಕೊಟ್ಟಿರುವುದು ಏಕೆ ಬಸವರಾಜ ಬೊಮ್ಮಾಯಿಯವರೇ.

.ಇದನ್ನೂ ಓದಿ : GST: ಮನೆ ಬಾಡಿಗೆಗೂ ಜಿಎಸ್​​ಟಿ..! 

ದೇಶಕ್ಕೆ ತ್ರಿವರ್ಣ ಧ್ವಜ ಅಲ್ಲ ಭಗವಾಧ‍್ವಜವೇ ಇರಬೇಕು ಎಂದು ಪ್ರತಿಪಾದಿಸುತ್ತಿದ್ದ ಆರ್.ಎಸ್.ಎಸ್ ಸರಸಂಘಚಾಲಕರಾದ ಕೆ.ಬಿ.ಹೆಡಗೆವಾರ್, ಎಂ.ಎಸ್ ಗೋಲ್ವಾಲ್ಕರ್ ಅವರ ನಿಲುವಿನ ಬಗ್ಗೆ ನಿಮ್ಮ ಮತ್ತು ನಿಮ್ಮ ಪಕ್ಷದ ಈಗಿನ ಅಭಿಪ್ರಾಯವೇನು ಬಸವರಾಜ ಬೊಮ್ಮಾಯಿಯವರೇ.

ತ್ರಿವರ್ಣ ಧ್ವಜ ರಾಷ್ಟ್ರೀಯ ಮುನ್ನೋಟ, ಸತ್ಯ, ಇತಿಹಾಸ ಇಲ್ಲವೇ ಪರಂಪರೆಯಿಂದ ಪ್ರೇರಣೆ ಪಡೆದು ತಯಾರಿಸಿದ್ದಲ್ಲ, ಇದು ಫ್ರೆಂಚ್ ಕ್ರಾಂತಿಯ ಘೋಷಣೆಗಳ ಎರವಲು” ಎಂದು ಆರ್.ಎಸ್.ಎಸ್ ಸರಸಂಘಚಾಲಕ ಗೋಲ್ವಾಲ್ಕರ್ ತಮ್ಮ ‘ಬಂಚ್ ಆಫ್ ಥಾಟ್ಸ್’ ನಲ್ಲಿ ಹೇಳಿರುವುದನ್ನು ನೀವು ಧಿಕ್ಕರಿಸುತ್ತೀರಾ ಬಸವರಾಜ ಬೊಮ್ಮಾಯಿಯವರೇ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ನೆನಪಿಗಾಗಿ ದೇಶದ ಜನ ತಮ್ಮ ಟ್ವೀಟರ್ ಡಿಪಿಯಲ್ಲಿ ರಾಷ್ಟ್ರಧ್ವಜವನ್ನ ಹಾಕಬೇಕೆಂದು ತಿಳಿಸಿದರೂ ಆರ್ ಎಸ್ ಎಸ್ ಸರಸಂಘ ಚಾಲಕ @DrMohanBhagwat ಅವರು ಮಾತ್ರ @PMOIndia ಕರೆಯನ್ನು ಪಾಲಿಸದೆ ಇರಲು ಕಾರಣವೇನು? 8/14#AnswerMadiBommai pic.twitter.com/BtUq3NoEh3

— Siddaramaiah (@siddaramaiah) August 12, 2022

“ತ್ರಿವರ್ಣ ಧ್ವಜ ಎನ್ನುವುದು ಫ್ರೆಂಚ್ ಕ್ರಾಂತಿಯ ಘೋಷಣೆಗಳಾದ ಸ್ವಾತಂತ್ರ್ಯ, ಸಮಾನತೆ, ಮತ್ತು ಭಾತೃತ್ವದ ಬಗೆಗಿನ ಇಲ್ಲಿನ ಸ್ವಾತಂತ್ರ್ಯ ಹೋರಾಟಗಾರರ ಗೀಳಿನಿಂದ ಹುಟ್ಟು ಪಡೆದಿರುವುದು” ಎಂದು ಗೋಲ್ವಾಲ್ಕರ್ ಹೇಳಿರುವುದನ್ನು ಈಗಲೂ ನೀವು ಒಪ್ಪುವಿರಾ ಬಸವರಾಜ ಬೊಮ್ಮಾಯಿಯವರೇ.

“ರಾಷ್ಟ್ರಧ್ವಜವನ್ನು ಭಾರತೀಯರು ಒಪ್ಪಲಾರರು, ಮೂರು ಎನ್ನುವುದೇ ಅಪಶಕುನ. ತ್ರಿವರ್ಣಧ್ವಜ ಖಂಡಿತ ದೇಶದ ಮೇಲೆ ಮಾನಸಿಕವಾಗಿ ದುಷ್ಪರಿಣಾಮವನ್ನು ಬೀರಲಿರುವುದು ಮಾತ್ರವಲ್ಲ ಹಾನಿಕಾರಿಯಾಗಬಹುದು” ಎಂದು 1947ರಲ್ಲಿಯೇ ಆರ್.ಎಸ್.ಎಸ್ ಮುಖವಾಣಿ ಆರ್ಗನೈಸರ್ ಪ್ರಕಟಿಸಿದ್ದ ಲೇಖನವನ್ನು ನೀವು ಒಪ್ಪುವಿರಾ?

ರಾಷ್ಟ್ರಧ್ವಜದ ಬಗೆಗಿನ ನಿಲುವನ್ನು ಆರ್ ಎಸ್ ಎಸ್ ಬದಲಾಯಿಸಿಕೊಂಡು ‘ಹರ್ ಘರ್ ಮೇ ತಿರಂಗಾ’ ಕಾರ್ಯಕ್ರಮವನ್ನು ಬೆಂಬಲಿಸುತ್ತದೆ ಎಂದು ನಿಮಗನಿಸುತ್ತಿದೆಯೇ? ಬದಲಾಯಿಸಿಕೊಂಡಿದ್ದರೆ ಅದಕ್ಕೆ ಕಾರಣಗಳೇನು ಎಂದು ತಿಳಿಸುವಿರಾ ಬಸವರಾಜ ಬೊಮ್ಮಾಯಿಯವರೇ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ನೆನಪಿಗಾಗಿ ದೇಶದ ಜನ ತಮ್ಮ ಟ್ವೀಟರ್ ಡಿಪಿಯಲ್ಲಿ ರಾಷ್ಟ್ರಧ್ವಜವನ್ನ ಹಾಕಬೇಕೆಂದು ತಿಳಿಸಿದರೂ ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಅವರು ಮಾತ್ರ ಭಾರತದ ಪ್ರಧಾನಿಯ  ಕರೆಯನ್ನು ಪಾಲಿಸದೆ ಇರಲು ಕಾರಣವೇನು?

ADVERTISEMENT
ADVERTISEMENT

ಕಳೆದ 75 ವರ್ಷಗಳಿಂದ ಚಾಲ್ತಿಯಲ್ಲಿದ್ದ ಧ್ವಜ ಸಂಹಿತೆಗೆ ತಿದ್ದುಪಡಿ ಮಾಡಿ ಹತ್ತಿ ಮತ್ತು ರೇಷ್ಮೆ ಬಟ್ಟೆಯ ಬದಲಿಗೆ ಪಾಲಿಸ್ಟರ್ ಬಟ್ಟೆಯಲ್ಲಿಯೂ ರಾಷ್ಟ್ರಧ್ವಜ ತಯಾರಿಸಲು ಅನುಮತಿ ನೀಡಿರುವುದು ರಾಷ್ಟ್ರಧ್ವಜಕ್ಕೆ ಮಾಡಿದ ಅವಮಾನ ಎಂದು ನಿಮಗೆ ಅನಿಸುವುದಿಲ್ಲವೇ.

ಪ್ರಧಾನಿ @narendramodi ಅವರು ನೀಡಿರುವ ಕರೆಯನ್ನು ಪಾಲಿಸುವ ಏಕೈಕ ಕಾರಣಕ್ಕಾಗಿ ಸಾಮಾನ್ಯ ಜನರಿಂದ ಬಲಾತ್ಕಾರವಾಗಿ ದುಡ್ಡು ಕಿತ್ತುಕೊಂಡು ರಾಷ್ಟ್ರಧ್ವಜವನ್ನು ಮಾರಾಟ ಮಾಡುತ್ತಿರುವ ನೀವು, ಈ ಮೂಲಕ ರಾಷ್ಟ್ರಧ್ವಜದ ಮೇಲಿನ ಗೌರವಕ್ಕೆ ಕುಂದುತರುತ್ತಿದ್ದೇವೆ ಎಂದು ನಿಮಗೆ ಅನಿಸುವುದಿಲ್ಲವೇ @BSBommai? 14/14#AnswerMadiBommai pic.twitter.com/n0U0SFjJht

— Siddaramaiah (@siddaramaiah) August 12, 2022

ಮೇಕ್ ಇನ್ ಇಂಡಿಯಾದ ಪ್ರಚಾರ ಮಾಡುವ ಪ್ರಧಾನಿ ಮೋದಿ ಸರ್ಕಾರ ಧ್ವಜಸಂಹಿತೆಗೆ ತಿದ್ದುಪಡಿ ಮಾಡಿ ಪಾಲಿಸ್ಟರ್ ಬಟ್ಟೆ ಬಳಸಲು ಅವಕಾಶ ನೀಡಿರುವುದರಿಂದ ಚೀನಾದಂತಹ ದೇಶಗಳಿಂದ ಕಡಿಮೆ ಬೆಲೆಯ ರಾಷ್ಟ್ರಧ್ವಜಗಳು ಬಂದು ರಾಶಿಬೀಳುತ್ತಿರುವುದನ್ನು ಹೇಗೆ ಸಮರ್ಥಿಸಿಕೊಳ್ಳುತ್ತೀರಿ ಬಸವರಾಜ ಬೊಮ್ಮಾಯಿಯವರೇ.

ಪಾಲಿಸ್ಟರ್ ಬಟ್ಟೆ ಬಳಸಲು ಅವಕಾಶ ನೀಡಿರುವುದು ರಾಷ್ಟ್ರಧ್ವಜವನ್ನು ಜನಪ್ರಿಯಗೊಳಿಸಲಿಕ್ಕಾಗಿಯೇ? ಇಲ್ಲವೇ ನಿಮ್ಮ ಪಕ್ಷದ ಪೋಷಕರಾದ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲಿಕ್ಕಾಗಿಯೇ ಬಸವರಾಜ ಬೊಮ್ಮಾಯಿಯವರೇ.

ಪಾಲಿಸ್ಟರ್ ಬಟ್ಟೆಯಿಂದ ರಾಷ್ಟ್ರಧ್ವಜ ತಯಾರಿಕೆಗೆ ಅವಕಾಶ ನೀಡುವಾಗ ಇಡೀ ದೇಶಕ್ಕೆ ರಾಷ್ಟ್ರಧ್ವಜ ತಯಾರಿಸಿಕೊಡುತ್ತಿದ್ದ ಹುಬ್ಬಳ್ಳಿಯ ಬೆಂಗೇರಿ ಮತ್ತು ಧಾರವಾಡದ ಗರಗ ಖಾದಿ ಕೇಂದ್ರಗಳಿಗೆ ಆಗುವ ಅನ್ಯಾಯವನ್ನು ನೀವು ಪ್ರಧಾನ ಮಂತ್ರಿಗಳ ಗಮನಕ್ಕೆ ತರಲಿಲ್ಲವೇ ಬಸವರಾಜ ಬೊಮ್ಮಾಯಿಯವರೇ.

ಧ್ವಜ ಸಂಹಿತೆಗೆ ತಿದ್ದುಪಡಿ ತಂದು ಪಾಲಿಸ್ಟರ್ ಬಟ್ಟೆ ಬಳಕೆಗೂ ಅವಕಾಶ ನೀಡಿರುವುದರಿಂದ ಗರಗ ಖಾದಿ ಗ್ರಾಮದ್ಯೋಗ ಕೇಂದ್ರದ ನೂರಾರು ಕಾರ್ಮಿಕರು ಮುಷ್ಕರದಲ್ಲಿ ತೊಡಗಿರುವುದು ನಿಮ್ಮ ಗಮನಕ್ಕೆ ಬಂದಿದೆಯೇ ಬಸವರಾಜ ಬೊಮ್ಮಾಯಿಯವರೇ.

ಪ್ರಧಾನಿ ನರೇಂದ್ರಮೋದಿ ಅವರು ನೀಡಿರುವ ಕರೆಯನ್ನು ಪಾಲಿಸುವ ಏಕೈಕ ಕಾರಣಕ್ಕಾಗಿ ಸಾಮಾನ್ಯ ಜನರಿಂದ ಬಲಾತ್ಕಾರವಾಗಿ ದುಡ್ಡು ಕಿತ್ತುಕೊಂಡು ರಾಷ್ಟ್ರಧ್ವಜವನ್ನು ಮಾರಾಟ ಮಾಡುತ್ತಿರುವ ನೀವು, ಈ ಮೂಲಕ ರಾಷ್ಟ್ರಧ್ವಜದ ಮೇಲಿನ ಗೌರವಕ್ಕೆ ಕುಂದುತರುತ್ತಿದ್ದೇವೆ ಎಂದು ನಿಮಗೆ ಅನಿಸುವುದಿಲ್ಲವೇ ಬಸವರಾಜ ಬೊಮ್ಮಾಯಿಯವರೇ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ.

(ನಟ ಗಣೇಶ್, ದಿಗಂತ್, ಪವನ್​ಕುಮಾರ್ ನಟನೆಯ ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ-2 ಚಿತ್ರದ ಪ್ರೇಕ್ಷಕರ ವಿಮರ್ಶೆ)

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
ADVERTISEMENT
Previous Post

ಹಾಸ್ಯ ನಟ ರಾಜು ಶ್ರೀವಾಸ್ತವ್ ಆರೋಗ್ಯ ಗಂಭೀರ

Next Post

Paresh Mesta Murder Case : ಆರೋಪಿಗೆ​ ವಕ್ಪ್ ಬೋರ್ಡ್​​ ಹುದ್ದೆ ನೀಡಿದ ಬಿಜೆಪಿ ಸರ್ಕಾರ

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
Paresh Mesta

Paresh Mesta Murder Case : ಆರೋಪಿಗೆ​ ವಕ್ಪ್ ಬೋರ್ಡ್​​ ಹುದ್ದೆ ನೀಡಿದ ಬಿಜೆಪಿ ಸರ್ಕಾರ

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!