ಅಪ್ಪನಿಗೆ ಮಗ ಯತೀಂದ್ರ ಕ್ಷೇತ್ರ ತ್ಯಾಗ, ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಕ್ಷೇತ್ರ ತ್ಯಾಗ ಮಾಡಿದ್ದಾರೆ.

ವರುಣಾದಿಂದ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್​ ಟಿಕೆಟ್​ ಘೋಷಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಸ್ವಕ್ಷೇತ್ರ ಕನಕಪುರದಿಂದ ಟಿಕೆಟ್​ ಘೋಷಣೆ ಮಾಡಲಾಗಿದೆ.

ಮಾಜಿ ಸಚಿವ ಹೆಚ್​ ಸಿ ಮಹದೇವಪ್ಪ ಅವರಿಗೆ ಟಿ ನರಸೀಪುರದಿಂದ ಟಿಕೆಟ್​ ನೀಡಲಾಗಿದೆ.

ಇತ್ತೀಚೆಗಷ್ಟೇ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್​ ಅವರ ಪುತ್ರ ದರ್ಶನ್​ಗೆ ನಂಜನಗೂಡು ಕ್ಷೇತ್ರದಿಂದ ಟಿಕೆಟ್​ ನೀಡಲಾಗಿದೆ.