4 ರಾಜ್ಯಗಳ ಬಿಜೆಪಿ ಅಧ್ಯಕ್ಷರ ಬದಲಾವಣೆ – ಕಾಂಗ್ರೆಸ್​ನಿಂದ ವಲಸೆ ಬಂದ ನಾಯಕನಿಗೆ ಅಧ್ಯಕ್ಷ ಹುದ್ದೆ

ನಾಲ್ಕು ರಾಜ್ಯಗಳಿಗೆ ಬಿಜೆಪಿ ಹೊಸ ರಾಜ್ಯಾಧ್ಯಕ್ಷರನ್ನು ನೇಮಿಸಿದೆ.

ಈ ವರ್ಷದ ಅಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ತೆಲಂಗಾಣ ಬಿಜೆಪಿ ಘಟಕದ ಅಧ್ಯಕ್ಷರನ್ನು ಬದಲಾವಣೆ ಮಾಡಿದೆ.

ಬಂಡಿ ಸಂಜಯ್​ ಕುಮಾರ್​ ಅವರನ್ನು ಕೆಳಗಿಳಿಸಿ ಕೇಂದ್ರ ಸಚಿವ ಜಿ ಕಿಶನ್​ ರೆಡ್ಡಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ.

ಆಂಧ್ರಪ್ರದೇಶ ಬಿಜೆಪಿ ಅಧ್ಯಕ್ಷರಾಗಿ ಡಿ ಪುರಂದೇಶ್ವರಿ ಅವರನ್ನು ನೇಮಿಸಲಾಗಿದೆ.

ಪಂಜಾಬ್​ ಬಿಜೆಪಿ ಘಟಕದ ಅಧ್ಯಕ್ಷರಾಗಿ ಸುನಿಲ್​ ಜಾಖರ್​ ಅವರನ್ನು ನೇಮಿಸಲಾಗಿದ್ದು, ಜಾರ್ಖಂಡ್​ ಬಿಜೆಪಿ ಅಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್​ ಮರಾಂಡಿ ಅವರನ್ನು ನೇಮಿಸಲಾಗಿದೆ.

ಪಂಜಾಬ್​ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ ಹೀನಾಯ ಸೋಲಿನ ಬಳಿಕ ಜಾಖಡ್​ ಅವರು ಬಿಜೆಪಿ ಸೇರ್ಪಡೆಯಾಗಿದ್ದರು.

ಕಾಂಗ್ರೆಸ್​ನಿಂದ ವಲಸೆ ಬಂದಿರುವ ಮಾಜಿ ಸಿಎಂ ಕಿರಣ್​ ಕುಮಾರ್​ ರೆಡ್ಡಿ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸದಸ್ಯರನ್ನಾಗಿ ನೇಮಿಸಲಾಗಿದೆ.

LEAVE A REPLY

Please enter your comment!
Please enter your name here