ಕೋವಿಡ್ ಪ್ರಕರಣ ಹೆಚ್ಚಳ ಆಗುವ ಆತಂಕದ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಯನ್ನು ಸ್ಥಗಿತಗೊಳಿಸುವಂತೆ ಕೋರಿ ಖುದ್ದು ಕೇಂದ್ರ ಆರೋಗ್ಯ ಸಚಿವರೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.
ಈ ಮೂಲಕ ಭಾರತ್ ಜೋಡೋ ಯಾತ್ರೆ ಸಂಬಂಧ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ಸಂಘರ್ಷ ಈಗ ಹೊಸ ತಿರುವು ಪಡೆದಿದೆ.
ರಾಜಸ್ಥಾನದಲ್ಲಿ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆಯಿಂದ ಕೋವಿಡ್ ಸೋಂಕು ಹಬ್ಬುತ್ತಿರುವ ಬಗ್ಗೆ ರಾಜಸ್ಥಾನದ ಬಿಜೆಪಿ ಸಂಸದರಾದ ಪಿ ಪಿ ಚೌಧರಿ, ನಿಹಾಲ್ ಚಂದ್ ಮತ್ತು ದೇವಜಿ ಪಟೇಲ್ ಅವರು ಡಿಸೆಂಬರ್ 20ರಂದು ಪತ್ರವನ್ನು ಬರೆದು ಆತಂಕ ಹಂಚಿಕೊಂಡಿದ್ದಾರೆ
ಎಂದು ಕೇಂದ್ರ ಆರೋಗ್ಯ ಸಚಿವ ಡಾ ಮನ್ಶುಖ್ ಮಾಂಡವಿಯ ಅವರು ರಾಹುಲ್ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕೋವಿಡ್ನಿಂದ ರಾಜಸ್ಥಾನವನ್ನು ಮತ್ತು ದೇಶವನ್ನು ಕಾಪಾಡುವ ಸಲುವಾಗಿ ಎರಡು ಪ್ರಮುಖ ಅಂಶಗಳನ್ನು ಉಲ್ಲೇಖ ಮಾಡುತ್ತಿದ್ದೇನೆ.
1. ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ಮಾರ್ಗಸೂಚಿಗಳ ಪಾಲನೆ ಆಗಬೇಕು. ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಬಳಕೆ ಮಾಡಬೇಕು. ಲಸಿಕೆ ಪಡೆದವರು ಮಾತ್ರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕು. ಈಗಾಗಲೇ ಯಾತ್ರೆಯಲ್ಲಿ ಪಾಲ್ಗೊಂಡವರನ್ನು ಐಸೋಲೇಟ್ ಮಾಡಬೇಕು.
2. ಒಂದು ವೇಳೆ ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ಮಾರ್ಗಸೂಚಿಯ ಪಾಲನೆ ಸಾಧ್ಯವಾಗದೇ ಇದ್ದಲ್ಲಿ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ ಮಹಾಮಾರಿಯಿಂದ ದೇಶವನ್ನು ರಕ್ಷಿಸುವ ಸಲುವಾಗಿ ಭಾರತ್ ಜೋಡೋ ಯಾತ್ರೆಯನ್ನು ಸ್ಥಗಿತಗೊಳಿಸುವಂತೆ
ಆರೋಗ್ಯ ಸಚಿವರು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿ ಡಿಸೆಂಬರ್ 20ರಂದೇ ಪತ್ರ ಬರೆದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ವರ್ಷಕ್ಕೆ 59 ಸಾವಿರ ಕೋಟಿ ರೂಪಾಯಿ ಖರ್ಚಾಗಲಿದೆ.
ಗ್ಯಾರಂಟಿ ಯೋಜನೆಗಳ ಜಾರಿ ಘೋಷಣೆ ಬಳಿಕ ಇದೇ ಮೊದಲ ಬಾರಿಗೆ...
ಜಾತಿವಾರು ಸಮೀಕ್ಷಾ ವರದಿಯನ್ನು ನಮ್ಮ ಸರ್ಕಾರ ಸ್ವೀಕರಿಸಲಿದೆ ಮತ್ತು ವಸ್ತುಸ್ಥಿತಿ ಆಧರಿಸಿ ಜನರಿಗೆ ಶಿಕ್ಷಣ, ಉದ್ಯೋಗ ಮತ್ತು ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು...
ಅವಧಿಗೂ ಮೊದಲೇ ಖಾಲಿಯಾಗಿರುವ ವಿಧಾನಪರಿಷತ್ನ ಮೂರು ಸ್ಥಾನಗಳಿಗೆ ಭಾರತದ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿದೆ.
ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಜಯ ಸಾಧಿಸಿರುವ ಕಾಂಗ್ರೆಸ್ ಪರಿಷತ್ ಉಪ ಚುನಾವಣೆಯಲ್ಲೂ ಮೂರು ಸ್ಥಾನಗಳನ್ನು ಗೆಲ್ಲಲಿದೆ.
ವಿಧಾನಸಭಾ ಸದಸ್ಯರು...
ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ಗೆ ಮೂರು ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ ಆಗಿದೆ.
ಭಾರತದ ಚುನಾವಣಾ ಆಯೋಗ ಚುನಾವಣಾ ದಿನಾಂಕ ಪ್ರಕಟಿಸಿದೆ.
ಇದೇ ತಿಂಗಳ ಅಂದ್ರೆ ಜೂನ್ 30ರಂದು ಮತದಾನ ನಡೆಯಲಿದ್ದು, ಅವತ್ತೇ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಲಕ್ಷ್ಮಣ...
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ತನಿಖಾಸ್ತ್ರ ಮುಂದುವರಿಸಿದೆ.
ಸಹಾಯಕ ಸರ್ಕಾರಿ ಅಭಿಯೋಜಕರು ಮತ್ತು ಸಹಾಯಕ ಸರ್ಕಾರಿ ವಕೀಲರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ಸಂಬಂಧ...
ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರಿಗೆ ನೀಡಲಾಗಿದ್ದ ಅಧ್ಯಯನ ರಜೆಯನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರ ಅವರನ್ನು ವಾರ್ತಾ ಮತ್ತು ಪ್ರಸಾರ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಿದೆ.
ಕಳೆದ ವರ್ಷ ಜನವರಿ 11ರಿಂದ ಹೇಮಂತ್...
ಹನ್ನೊಂದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಆದೇಶ ಹೊರಡಿಸಿದೆ.
ಕಪಿಲ್ ಮೋಹನ್ ಅವರನ್ನು ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.
ಉಮಾಶಂಕರ್ ಎಸ್ ಆರ್ ಅವರನ್ನು ಶಿಕ್ಷಣ ಇಲಾಖೆಯ ಹೆಚ್ಚುವರಿ...
ದೇಶದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳದೇ ಇರುವ ಯಾವುದಾದರೂ ಒಂದು ಪಕ್ಷವನ್ನು ತೋರಿಸಿ ಎಂದು ಜೆಡಿಎಸ್ ವರಿಷ್ಠ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಸವಾಲು ಹಾಕಿದ್ದಾರೆ.
ಈ ಮೂಲಕ ಲೋಕಸಭಾ...
ಒಡಿಶಾ ರೈಲು ದುರಂತ ಸಂಬಂಧ ರೈಲ್ವೆ ಸಚಿವರ ರಾಜೀನಾಮೆ ಕೇಳುವುದು ಸರಿಯಲ್ಲ ಎಂದು ಜೆಡಿಎಸ್ ವರಿಷ್ಠ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಪ್ರತಿಕ್ರಿಯಿಸಿದ್ದಾರೆ.
ಹಾನಿ ಸರಿಪಡಿಸಲು ರೈಲ್ವೆ ಸಚಿವರು ಅಗತ್ಯವಿರುವ...
ಈ ವರ್ಷದ ಅಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಕಾಂಗ್ರೆಸ್ಗೆ ದೊಡ್ಡ ಆಘಾತ ಎದುರಾಗಿದೆ. ಕಾಂಗ್ರೆಸ್ ಯುವ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ, ರಾಜಸ್ಥಾನ ಕಾಂಗ್ರೆಸ್ನ ಮಾಜಿ ಅಧ್ಯಕ್ಷರೂ ಆಗಿರುವ ಸಚಿನ್...