ತಮಿಳುನಾಡು ರಾಜ್ಯ ಸಾರಿಗೆ ನಿಗಮದ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ಜೊತೆಗಿನ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಇಂದಿನಿಂದ ಮುಷ್ಕರ ಶುರು ಮಾಡಿದ್ದಾರೆ.
15ನೇ ವೇತನ ಆಯೋಗಕ್ಕೆ ಒಪ್ಪಿಕೊಳ್ಳುವುದು, ನಿವೃತ್ತರಾಗಿರುವ ನೌಕರರ ತುಟ್ಟಿಭತ್ಯೆ ಹೆಚ್ಚಳ ಮತ್ತು ನಿಗಮದಲ್ಲಿ ಖಾಲಿ ಇರುವ ಚಾಲಕರು ಮತ್ತು ನಿರ್ವಾಹಕರ ಹುದ್ದೆಗಳನ್ನು ಭರ್ತಿ ಮಾಡುವಂತೆ ನೌಕರರು ಆಗ್ರಹಿಸಿದ್ದಾರೆ.
ಜನವರಿ 15ರಂದು ಮಕರ ಸಂಕ್ರಾಂತಿ ರಜೆಯ ಹೊತ್ತಲ್ಲೇ ಸಾರಿಗೆ ನಿಗಮದ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಜನಸಾಮಾನ್ಯರಿಗೆ ತೊಂದರೆ ಉಂಟಾಗುವುದು ಖಂಡಿತ.
ADVERTISEMENT
ADVERTISEMENT