ADVERTISEMENT
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ನೇಮಿಸಲಾಗಿದೆ.
ದಿನೇಶ್ ಗುಂಡೂರಾವ್ ಬೆಂಗಳೂರು ನಗರದ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕ.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನೇಮಿಸಲಾಗಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಮಂಗಳೂರು ಮತ್ತು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ತು. ಹಿರಿತನ ಪರಿಗಣಿಸಿ ಯು ಟಿ ಖಾದರ್ ಅವರನ್ನು ವಿಧಾನಸಭೆಯ ಸ್ಪೀಕರ್ ಮಾಡಲಾಗಿದೆ. ಮೊದಲ ಬಾರಿಗೆ ಗೆದ್ದಿರುವ ಕಾರಣ ಪುತ್ತೂರು ಶಾಸಕ ಅಶೋಕ್ ರೈಗೆ ಸಚಿವ ಸ್ಥಾನ ಸಿಕ್ಕಿಲ್ಲ.
ಉಡುಪಿಯಲ್ಲಿ ಕಾಂಗ್ರೆಸ್ ಒಂದೂ ಸ್ಥಾನ ಗೆದ್ದಿಲ್ಲ.
ಹೀಗಾಗಿ ಎರಡೂ ಜಿಲ್ಲೆಗಳಿಗೆ ಹೊರಗಿನವರೇ ಉಸ್ತುವಾರಿ ಸಚಿವರಾಗಿದ್ದಾರೆ.
ಚಿಕ್ಕಮಗಳೂರಲ್ಲಿ ಕಾಂಗ್ರೆಸ್ ಐದೂ ಸ್ಥಾನ ಗೆದ್ದಿತ್ತಾದರೂ ಕಿರಿಯ ಶಾಸಕರೆಂಬ ಕಾರಣಕ್ಕೆ ಸಚಿವ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಚಿಕ್ಕಮಗಳೂರಿಗೆ ಕೆ ಜೆ ಜಾರ್ಜ್ ಉಸ್ತುವಾರಿ ಸಚಿವರಾಗಿದ್ದಾರೆ.
ಉತ್ತರ ಕನ್ನಡಕ್ಕೆ ಮಾಂಕಾಳ್ ವೈದ್ಯ ಉಸ್ತುವಾರಿ ಸಚಿವರಾಗಿದ್ದಾರೆ.
ADVERTISEMENT