ಆಹಾರ ಭದ್ರತೆ ಮೇಲಿನ ಕೇಂದ್ರ ಸರ್ಕಾರದ ಅನುದಾನವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಡಿತ ಮಾಡಿದೆ.
ಇವತ್ತು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಸರ್ಕಾರದ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಹಾರ ಭದ್ರತೆಗಾಗಿ ಬಜೆಟ್ನಲ್ಲಿ 2 ಲಕ್ಷ ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಗೆ ಈ ಬಜೆಟ್ನಲ್ಲಿ 2 ಲಕ್ಷ ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ.
ಈ ವರ್ಷದ ಜನವರಿಯಿಂದ ಒಂದು ವರ್ಷದ ಮಟ್ಟಿಗೆ ಉಚಿತ ಪಡಿತರ ನೀಡಲಾಗುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕಳೆದ ಬಜೆಟ್ನಲ್ಲಿ ಆಹಾರ ಭದ್ರತೆಗಾಗಿ ಮೋದಿ ಸರ್ಕಾರ 2 ಲಕ್ಷದ 70 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗಿತ್ತು.