ಇಂದು ಬೆಳ್ಳಂಬೆಳಗ್ಗೆ ಭ್ರಷ್ಟಾಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಅಧಿಕಾರಿಗಳು ನಡೆಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಪತ್ನಿ ಸಹೋದರ ಡಾ. ಪ್ರಭುಲಿಂಗ ಮಾನಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್.ಪಿ ಕರ್ನೂಲ್ ನೇತೃತ್ವದ ತಂಡ ದಾಳಿ ನಡೆಸಿದೆ.
ಡಾ. ಪ್ರಭುಲಿಂಗ ಈ ಹಿಂದೆ ಕಲಬುರಗಿಯಲ್ಲಿ ಆರ್ ಸಿಎಚ್ ಆಗಿದ್ದು, ಇದೀಗ ಯಾದಗಿರಿಯ ಡಿಎಚ್ ಒ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಬೆಳ್ಳಂಬೆಳಗ್ಗೆ ಕಲಬುರಗಿ ಹಾಗೂ ಯಾದಗಿರಿ ಮನೆ, ಕಚೇರಿಗಳ ಜೊತೆಗೆ ಫಾರ್ಮ್ ಹೌಸ್ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಡತಗಳನ್ನು ಪರಿಶೀಲನೆ ನಡೆಸಿದ್ದಾರೆ.