Friday, May 9, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ʻಕೇಳುವುದಕ್ಕಿಂತ ಮೊದಲು, ಸಾಯೋದೇ ಮೇಲುʼ- ಈ ಮೂವರು ಮಾಜಿ CM ಮುಂದಿನ ಹಾದಿ ಏನು..?

PratikshanaNews by PratikshanaNews
12th December 2023
in News
0
ʻಕೇಳುವುದಕ್ಕಿಂತ ಮೊದಲು, ಸಾಯೋದೇ ಮೇಲುʼ-  ಈ ಮೂವರು ಮಾಜಿ CM ಮುಂದಿನ ಹಾದಿ ಏನು..?
0
SHARES
22
VIEWS
Share on FacebookShare on Twitter

ಮೂರು ರಾಜ್ಯಗಳಲ್ಲಿ ಬಿಜೆಪಿ ಹೊಸಬರನ್ನು ಮುಖ್ಯಮಂತ್ರಿಗಳನ್ನಾಗಿ ಘೋಷಿಸಿದೆ. ಛತ್ತೀಸ್‌ಗಢದಲ್ಲಿ ವಿಷ್ಣು ದಿಯೋ ಸಾಯಿ, ಮಧ್ಯಪ್ರದೇಶದಲ್ಲಿ ಮೋಹನ್‌ ಯಾದವ್‌ ಮತ್ತು ರಾಜಸ್ಥಾನದಲ್ಲಿ ಭಜನ್‌ಲಾಲ್‌ ಶರ್ಮಾ ಸಿಎಂ ಸ್ಥಾನಕ್ಕೆ ಪಕ್ಷದ ಹೊಸ ಆಯ್ಕೆಗಳು.

ಹಾಗಾದರೆ ದೀರ್ಘಕಾಲದಿಂದ ಮುಖ್ಯಮಂತ್ರಿಗಳಾಗಿದ್ದ ಮೂವರ ರಾಜಕೀಯ ಭವಿಷ್ಯ ಏನು..? ಛತ್ತೀಸ್‌ಗಢ ಮುಖ್ಯಮಂತ್ರಿಗಳಾಗಿದ್ದ ರಮಣ್‌ ಸಿಂಗ್‌, ರಾಜಸ್ಥಾನದ ಮುಖ್ಯಮಂತ್ರಿಯಾಗಿದ್ದ ವಸುಂಧರಾ ರಾಜೆ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿದ್ದ ಶಿವರಾಜ್‌ ಸಿಂಗ್‌ ಚವ್ಹಾಣ್‌ ಅವರ ಮುಂದಿನ ಆಯ್ಕೆಗಳೇನು..?

ಶಿವರಾಜ್‌ ಸಿಂಗ್‌ ಚವ್ಹಾಣ್‌:

ಮೋಹನ್‌ ಯಾದವ್‌ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ನೀಡಿದ ವಿದಾಯದ ಭಾಷಣದಲ್ಲಿ ʻಹೋಗಿ ಕೇಳುವುದಕ್ಕಿಂತ ಸಾಯೋದೇ ಮೇಲುʼ ಎಂದು ಶಿವರಾಜ್‌ ಸಿಂಗ್‌ ಚವ್ಹಾಣ್‌ ಆಡಿದ ಮಾತು ಅತ್ಯಂತ ಮಹತ್ವದ್ದು.

2003ರಿಂದ 2018ರವರೆಗೆ ಮತ್ತು 2020ರಿಂದ 2023ರವರೆಗೆ 18 ವರ್ಷಗಳವರೆಗೆ ಮುಖ್ಯಮಂತ್ರಿಯಾಗಿದ್ದವರು ಚವ್ಹಾಣ್‌. ಮಧ್ಯಪ್ರದೇಶದಲ್ಲಿ ಪ್ರೀತಿಯಿಂದ ಮಾಮಾ ಎಂದು ಕರೆಸಿಕೊಳ್ಳುವ ಚವ್ಹಾಣ್‌ ವಯಸ್ಸು 64. ಅಂದರೆ ಬಿಜೆಪಿಯಲ್ಲಿರುವ ಅಘೋಷಿತ ವಯಸ್ಸಿನ ಮಿತಿಗಿಂತ ಆರತ್ತು ವರ್ಷ ಕಡಿಮೆ.

ಗುಜರಾತ್‌ ಮುಖ್ಯಮಂತ್ರಿ ಹುದ್ದೆಯಿಂದ ಆನಂದಿಬೆನ್‌ ಪಟೇಲ್‌ ಅವರನ್ನು ಇಳಿಸಿದ್ದ ಬಿಜೆಪಿ ಸೀದಾ ಕಳುಹಿಸಿದ್ದು ರಾಜ್ಯಪಾಲೆಯನ್ನಾಗಿ. ಚವ್ಹಾಣ್‌ ಅವರನ್ನೂ ಅದೇ ರೀತಿ ರಾಜ್ಯಪಾಲರನ್ನಾಗಿ ಕಳುಹಿಸಬಹುದು.

ಮೋದಿಗಿಂತಲೂ ಮೊದಲೇ ಮುಖ್ಯಮಂತ್ರಿಯಾಗಿ ಹೆಸರು ಮಾಡಿದ್ದ ಚವ್ಹಾಣ್‌ ಅವರನ್ನು ಬಿಜೆಪಿ ಪ್ರಧಾನಮಂತ್ರಿ ಮೋದಿ ಅವರ ಸರ್ಕಾರದಲ್ಲಿ ಸಚಿವರನ್ನಾಗಿ ಮಾಡಬಹುದು. (ಮುಂದಿನ ಲೋಕಸಭಾ ಚುನಾವಣೆಗೂ ಮೊದಲೇ ಮಾಡಬಹುದು ಅಥವಾ ಒಂದು ವೇಳೆ ಲೋಕಸಭಾ ಚುನಾವಣೆ ಬಳಿಕ ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬಂದರೆ ಆ ಬಳಿಕ ಮಾಡಬಹುದು). ಗೋವಾದ ಮುಖ್ಯಮಂತ್ರಿಯಾಗಿದ್ದ ಮನೋಹರ್‌ ಪರಿಕ್ಕರ್‌ ಅವರನ್ನು ಸಿಎಂ ಸ್ಥಾನದಿಂದ ಇಳಿಸಿದ್ದ ಬಿಜೆಪಿ ಮೋದಿ ಸರ್ಕಾರದಲ್ಲಿ ಸಚಿವರನ್ನಾಗಿ ಮಾಡಿತ್ತು.

ಅಥವಾ ಪಕ್ಷದಲ್ಲೇ ಪ್ರಮುಖ ಹುದ್ದೆಯನ್ನು ನೀಡಬಹುದು. ಆದರೆ ಕಳೆದ ವರ್ಷ ಆಗಸ್ಟ್‌ನಲ್ಲಿ ಬಿಜೆಪಿ ತನ್ನ ಸಂಘಟನೆಯನ್ನು ಪುನರ್‌ರಚಿಸುವ ವೇಳೆ ಸಂಸದೀಯ ಮಂಡಳಿಯಿಂದ ಚವ್ಹಾಣ್‌ ಅವರನ್ನು ಕೈಬಿಟ್ಟಿತ್ತು ಮತ್ತು ಯಡಿಯೂರಪ್ಪ ಅವರನ್ನು ಮಂಡಳಿಗೆ ಸೇರಿಸಿತ್ತು.

ಚವ್ಹಾಣ್‌ ಅವರ ಮಾತನ್ನೇ ಉಲ್ಲೇಖಿಸುವುದಾದರೆ ʻಹೋಗಿ ಕೇಳುವುದಕ್ಕಿಂತ, ಸಾಯೋದೇ ಮೇಲುʼ. ಅಂದರೆ 18 ವರ್ಷ ಸುದೀರ್ಘ ಅಧಿಕಾರ ಅನುಭವಿಸಿದ ಚವ್ಹಾಣ್‌ಗೆ ಇನ್ಮುಂದೆ ಪಕ್ಷ ನೀಡಬಹುದಾದ ಹುದ್ದೆಗಳು ನಗಣ್ಯವಷ್ಟೇ.

ವಸುಂಧರಾ ರಾಜೆ:

2024ರ ಮಾರ್ಚ್‌ 8ರಂದು 71 ವರ್ಷ ಪೂರೈಸಲಿರುವ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆಗೆ ನಿರೀಕ್ಷೆಯಂತೆ ಮುಖ್ಯಮಂತ್ರಿ ಸ್ಥಾನ ಸಿಕ್ಕಿಲ್ಲ. 10 ವರ್ಷದ ಅವಧಿಗೆ ಸಿಎಂ ಆಗಿದ್ದ ರಾಜೆ ಬದಲಿಗೆ ಮೊದಲ ಬಾರಿಗೆ ಗೆದ್ದಿರುವ ಶಾಸಕ ಭಜನ್‌ಲಾಲ್‌ ಶರ್ಮಾ ಅವರನ್ನು ಬಿಜೆಪಿ ದೊಡ್ಡ ಹುದ್ದೆಗೆ ಆಯ್ಕೆ ಮಾಡಿದೆ.

ಈ ವಿಧಾನಸಭಾ ಚುನಾವಣೆಯಲ್ಲಿ ವಸುಂಧರಾ ಅವರನ್ನು ಪಕ್ಷದ ಗಂಭೀರವಾಗಿ ಪರಿಗಣಿಸಿರಲಿಲ್ಲ. ಮೋದಿ ನಾಯಕತ್ವದಲ್ಲೇ ಚುನಾವಣೆಗೆ ಹೋದ ಬಿಜೆಪಿ ರಾಜೆಗೆ ಪ್ರಮುಖ ಚುನಾವಣಾ ಜವಾಬ್ದಾರಿಗಳನ್ನೂ ಕೊಟ್ಟಿರಲಿಲ್ಲ. ಆ ಮೂಲಕ ಚುನಾವಣೆ ವೇಳೆಯೇ ಬಿಜೆಪಿ ಸಂದೇಶ ರವಾನಿಸಿತ್ತು.

ವಸುಂಧರಾ ಈಗ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆ. ಅವರ ಮಗ ದುಶ್ಯಂತ್‌ ಸಿಂಗ್‌ ನಾಲ್ಕು ಬಾರಿ ಲೋಕಸಭಾ ಸಂಸದ. ರಾಜಸ್ಥಾನ ಬಿಜೆಪಿ ಅಧ್ಯಕ್ಷರಾಗಿಯೂ ಅಧಿಕಾರ ಅನುಭವಿಸಿದ್ದ ೭೦ರ ಗಡಿ ದಾಟಿರುವ ರಾಜೆಗೆ ಬಿಜೆಪಿ ಮತ್ತೆ ದೊಡ್ಡ ಹುದ್ದೆಯನ್ನು ಕೊಟ್ಟು ಮಣೆ ಹಾಕುವುದು ಅನುಮಾನ. ರಾಜ್ಯಪಾಲೆಯನ್ನಾಗಿ ಮಾಡುವ ಆಫರ್‌ನ್ನು ಪಕ್ಷ ನೀಡಬಹುದಾದರೂ ಯಡಿಯೂರಪ್ಪರಂತೆ ಆಕೆಯೂ ಅದನ್ನು ನಿರಾಕರಿಸಬಹುದು ಅಥವಾ ಪುತ್ರ ದುಶ್ಯಂತ್‌ಗೆ ಮೋದಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಬಹುದು.

ಪ್ರಚಂಡ ಬಹುಮತದಿಂದ ರಾಜಸ್ಥಾನದಲ್ಲಿ ಬಿಜೆಪಿ ಗೆದ್ದಿರುವ ಕಾರಣ ಕರ್ನಾಟಕದಲ್ಲಿ ಯಡಿಯೂರಪ್ಪ ಪುತ್ರನಿಗೆ ಕರೆದು ಮಣೆ ಹಾಕಿದಂತೆ ರಾಜೆ ಕುಟುಂಬಕ್ಕೆ ಮಣೆ ಹಾಕುವುದು ಅನುಮಾನ.

ರಮಣ್‌ ಸಿಂಗ್‌:

2018ರಲ್ಲಿ ಛತ್ತೀಸ್‌ಗಢದಲ್ಲಿ ಬಿಜೆಪಿ ಹೀನಾಯವಾಗಿ ಸೋತ ಬಳಿಕ ಸದ್ದೇ ಇಲ್ಲದಂತೆ ಕಂಡವರು ಮಾಜಿ ಮುಖ್ಯಮಂತ್ರಿ ಎಂದರೆ ರಮಣ್‌ ಸಿಂಗ್.‌ ಛತ್ತೀಸ್‌ಗಢದಲ್ಲಿ ಇವರಷ್ಟು ದೀರ್ಘಕಾಲ ಯಾರೂ ಸಿಎಂ ಆಗಿಲ್ಲ. ಆದರೆ ರಮಣ್‌ ಸಿಂಗ್‌ ಅವರನ್ನು ಬಿಜೆಪಿ ಈಗ ವಿಧಾನಸಭೆಯ ಸ್ಪೀಕರ್‌ರನ್ನಾಗಿ ಮಾಡಿದೆ.

2018ರಲ್ಲಿ ಬಿಜೆಪಿ ಸೋತ ಬಳಿಕ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಮಾಡಲಾಯಿತು. ಚವ್ಹಾಣ್‌, ರಾಜೆ ಅಥವಾ ಯಡಿಯೂರಪ್ಪಗೆ ಹೋಲಿಸಿದರೆ ರಮಣ್‌ ಸಿಂಗ್‌ ಬಂಡೇಳುವ, ಸಿಡಿದೇಳುವ ನಾಯಕನಲ್ಲ.

ADVERTISEMENT
ADVERTISEMENT
  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
ADVERTISEMENT
Previous Post

Vastu Tips: ವಾಸ್ತು ಪ್ರಕಾರ ಮನೆಯ ಯಾವ ದಿಕ್ಕಿಗೆ ಪೊರಕೆ ಇಡಬೇಕು..?; ಇಲ್ಲಿದೆ ಉತ್ತರ

Next Post

Dog Bite Case: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ; ನಟ ದರ್ಶನ್‌ಗೆ ಕ್ಲೀನ್‌ ಚಿಟ್‌

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
Dog Bite Case: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ; ನಟ ದರ್ಶನ್‌ಗೆ ಕ್ಲೀನ್‌ ಚಿಟ್‌

Dog Bite Case: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ; ನಟ ದರ್ಶನ್‌ಗೆ ಕ್ಲೀನ್‌ ಚಿಟ್‌

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!