ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಗೆ ನಾಲ್ಕೇ ತಿಂಗಳು ಬಾಕಿ ಇರುವಂತೆ ಯಾವ ಪಕ್ಷದಿಂದ ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿಗಳು ಆಗಬಹುದು ಎಂಬ ಕುತೂಹಲ ಹಾಗೇ ಇದೆ.
ಮೂಲಗಳ ಪ್ರಕಾರ ಕಲ್ಯಾಣ ಕರ್ನಾಟಕದಲ್ಲಿ ಬರುವ ಬೀದರ್ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಉಮೇದುವಾರರು ಬಹುತೇಕ ಅಂತಿಮ ಆಗಿದ್ದಾರೆ.
ಬಸವಕಲ್ಯಾಣದಿಂದ ಯಾರಿಗೆ ಟಿಕೆಟ್..?
ಬಸವಕಲ್ಯಾಣದಿಂದ ಮಾಜಿ ವಿಧಾನಪರಿಷತ್ ಸದಸ್ಯ, ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರ ಪುತ್ರ ವಿಜಯ್ ಸಿಂಗ್ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆ ನಿಚ್ಚಳವಾಗಿದೆ. ತಮಗೆ ಟಿಕೆಟ್ ಪಕ್ಕಾ ಆಗಿದೆ ಎಂದು ವಿಜಯ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇವರ ಕಿರಿಯ ಸಹೋದರ ಅಜಯ್ ಸಿಂಗ್ ಜೇವರ್ಗಿ ಕ್ಷೇತ್ರದ ಶಾಸಕರು
2018ರಲ್ಲಿ ಬಸವಕಲ್ಯಾಣದಿಂದ ನಾರಾಯಣರಾವ್ ಅವರು ಗೆದ್ದು ಕಾಂಗ್ರೆಸ್ ಶಾಸಕರಾಗಿದ್ದರು. ನಾರಾಯಣರಾವ್ ಅವರ ನಿಧನದಿಂದ 2021ರಲ್ಲಿ ನಡೆದಿದ್ದ ಉಪ ಚುನಾವಣೆಯಲ್ಲಿ ವಿಜಯ್ ಸಿಂಗ್ ಟಿಕೆಟ್ ಆಕಾಂಕ್ಷಿಯಾಗಿದ್ದರೂ ಅವರ ಬದಲು ನಾರಾಯಣರಾವ್ ಅವರ ಪತ್ನಿ ಮಾಲಾ ನಾರಾಯಣರಾವ್ ಅವರಿಗೆ ಟಿಕೆಟ್ ಸಿಕ್ಕಿತ್ತು.
