ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಎಂದು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಹೇಳಿದ್ದಾರೆ. ಈ ಮೂಲಕ ರಾಜೀನಾಮೆ ನಾಟಕಕ್ಕೆ ತೆರೆಬಿದ್ದಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲು ಬಿರೇನ್ ಸಿಂಗ್ ಅವರು ರಾಜಭವನಕ್ಕೆ ತೆರಳಿದ್ದರು.
ಆದರೆ ರಾಜೀನಾಮೆಗೆ ಪ್ರತಿರೋಧಿಸಿದ ಅವರ ಬೆಂಬಲಿಗರು ರಾಜೀನಾಮೆ ಪತ್ರವನ್ನು ಹರಿದುಹಾಕಿದರು.
ಆ ಬಳಿಕ ಟ್ವೀಟ್ ಮಾಡಿರುವ ಬಿರೇನ್ ಸಿಂಗ್ ಇಂತಹ ಸನ್ನಿವೇಶದಲ್ಲಿ ನಾನು ರಾಜೀನಾಮೆ ಕೊಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮೂಲಗಳ ಪ್ರಕಾರ ಬಿರೇನ್ ಸಿಂಗ್ ಇವತ್ತು ರಾಜೀನಾಮೆ ನೀಡಬೇಕಿತ್ತು. ಜೂನ್ 25ರಂದು ಬಿರೇನ್ ಸಿಂಗ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು.
ADVERTISEMENT
ADVERTISEMENT